ಬನ್ನೂರಮಠ ಲೋಕಪೀಠ ಬೇಡವೆನ್ನಲು ಕಾರಣವೇನು?

ಆದರೆ ಸುಮಾರು ಐದು ತಿಂಗಳಿಂದ ತಮ್ಮ ವಿರುದ್ಧ ಟೀಕಾಸ್ತ್ರಗಳು ನುಗ್ಗಿಬರುತ್ತಿದ್ದರೂ ಮೌನಕ್ಕೆ ಶರಣಾಗಿದ್ದ ನ್ಯಾ ಬನ್ನೂರಮಠ ಅವರು ಇದ್ದಕ್ಕಿದ್ದಂತೆ ಒಲ್ಲದ ಮನಸ್ಸಿನಿಂದ ಸದಾನಂದ ಗೌಡರಿಗೆ ಒಲವಿನ ಓಲೆ ಬರೆದು ಪೀಠ ತ್ಯಾಗ ನಿರ್ಧಾರಕ್ಕೆ ಬರಲು ಕಾರಣವಾದರೂ ಏನು ಎಂದು ಕೆದಕಿದಾಗ ...
ವಾಸ್ತವವಾಗಿ, ಲೋಕಾಯುಕ್ತ ಪೀಠಕ್ಕೆ ನ್ಯಾ ಬನ್ನೂರುಮಠರ ನೇಮಕಕ್ಕೇ ಅಸ್ತು ಅನ್ನದಿರಲು 'ಅಕ್ರಮ ಸೈಟ್ ವಿವಾದ' ಕಾರಣವಲ್ಲ, ಅದಕ್ಕೆ ಬೇರೆಯದೇ ಕಾರಣ ಇದೆ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಜನವರಿ 21ರಂದು ಘೋಷಿಸಿದಾಗಲೇ ನ್ಯಾ ಬನ್ನೂರುಮಠರು ಕೈಚೆಲ್ಲಲು ನಿರ್ಧರಿಸಿದ್ದರು. ಆದರೆ ಹಿತೈಷಿಗಳ ಒತ್ತಾಸೆಯಿಂದ ಸುಮ್ಮನಾಗಿದ್ದರು.
ಆದರೆ ಕೊನೆಗೆ ಮಹತ್ವದ ಲೋಕಾಯುಕ್ತ ಪೀಠವೇರಲು ನ್ಯಾಯಮೂರ್ತಿ ಸಮೀನ್ದಾರ್ ರುದ್ರಯ್ಯ ಬನ್ನೂರುಮಠ ಅವರ ಹೆಸರನ್ನು ಕೈಬಿಡುವ ನಿಟ್ಟಿನಲ್ಲಿ ಅಂತಿಮ ಮೊಳೆ ಹೊಡೆದಿದ್ದು ಮಾತ್ರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಅವರು.
CJ ವಿಕ್ರಮಜಿತ್ ಅವರು ಕಳೆದ ವಾರ ಏನು ಮಾಡಿದರು ಅಂದರೆ ನೇರವಾಗಿ ಮುಖ್ಯಮಂತ್ರಿ ಸದಾನಂದ ಗೌಡರಿಗೆ ಪತ್ರ ಬರೆದು, ಬನ್ನೂರಮಠ ಅವರ ನೇಮಕಕ್ಕೆ ಸಂಬಂಧಿಸಿದಂತೆ ತಾವು ನೀಡಿದ್ದ ಶಿಫಾರಸು ಪತ್ರವನ್ನು ಹಿಂದಕ್ಕೆ ಪಡೆಯುವುದಾಗಿ ತಿಳಿಸಿದ್ದರು ಎನ್ನಲಾಗಿದೆ. ಇದನ್ನು ಅರಿತ ಬನ್ನೂರಮಠರು ಮತ್ತೆ ಮುಖಭಂಗವಾಗುವುದು ಬೇಡವೆಂದು ಅನಿವಾರ್ಯವಾಗಿ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications