ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜೀನಾಮೆ, ಈಗ ಸಿಎಂ ಸದಾನಂದರ ಸರದಿ

By Mahesh
|
Google Oneindia Kannada News

Vidhanasoudha
ಬೆಂಗಳೂರು, ಫೆ.8: ಪ್ರತ್ಯೇಕವಾಗಿ ತನಿಖೆ ಮಾಡುವ ಅಗತ್ಯವಿಲ್ಲ. ಕೂಡಲೇ ಮೂವರು ಸಚಿವರನ್ನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ. ನೈತಿಕ ಹೊಣೆ ಹೊತ್ತು ಸಿಎಂ ಸದಾನಂದ ಗೌಡರು ರಾಜೀನಾಮೆ ನೀಡಿ ವಿಧಾನಸಭೆ ವಿಸರ್ಜಿಸಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರ ತುಂಬ ಅಶ್ಲೀಲತೆ ತುಂಬಿ ತುಳುಕುತ್ತಿದೆ. ರೇವ್ ಪಾರ್ಟಿ ಪ್ರಕರಣ ಕಣ್ಮುಂದೆ ಇರುವಾಗಲೇ ಇಂಥ ಘಟನೆ ನಡೆದಿರುವುದು ಅಕ್ಷಮ್ಯ. ಮೂವರು ಸಚಿವರ ಶಾಸಕತ್ವದಿಂದ ಅನರ್ಹಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಆಗ್ರಹಿಸಿದ್ದಾರೆ.

ಈ ನಡುವೆ ಸಹಕಾರ ಸಚಿವ ಲಕ್ಷ್ಮಣ ಸವದಿ, ಇತರ ಇಬ್ಬರು ಸಚಿವರುಗಳಾದ ಸಿಸಿ ಪಾಟೀಲ್ ಮತ್ತು ಕೃಷ್ಣ ಪಾಲೆಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರು ಮೂವರು ಸಚಿವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.ರಾಜೀನಾಮೆ ನೀಡಿದ ನಂತರ ಮೂವರು ಸಚಿವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ, ಮಾತುಕತೆ ನಡೆಸಿದ್ದಾರೆ.

English summary
The Cooperative Minister of Karnataka, Lakshman Savadi has watched an dirty movie in Vidhana Soudha on Feb 7 during the proceedings of the lower house. Later three ministers Lakshman Savadi, C C Patil and Krishna Palemar resigned. Congress demanded sacking of trio.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X