ವಿಧಾನಸೌಧ ಶುಚಿಗೊಳಿಸಿ ಪಾವನವಾದ ಕಾಂಗ್ರೆಸ್!

ಮಾರುತಿ ವ್ಯಾನ್ ಮೇಲೆ ಹರಡಲಾಗಿದ್ದ ವಿಧಾನಸೌಧದ ಚಿತ್ರವನ್ನು ನೀರಿನಿಂದ ಶುಚಿಗೊಳಿಸುತ್ತಾ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರಕರಣದ ರೂವಾರಿಗಳು, ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್, ಲಕ್ಷ್ಮಣ ಸವದಿ ಹಾಗೂ ಸಿಸಿ ಪಾಟೀಲ್ರ ಪ್ರತಿಕೃತಿಗಳನ್ನು ದಹಿಸಿ, ರಾಜ್ಯ ಸರಕಾರದ ವಜಾಕ್ಕೆ ಆಗ್ರಹಿಸಿದರು.
ಬಿಜೆಪಿಯಿಂದ ಬ್ಲೂ ಫಿಲಂ ತಯಾರಿಕೆಯೂ: ಇತ್ತೀಚೆಗೆ ಮಲ್ಪೆ ರೇವ್ ಪಾರ್ಟಿಯನ್ನು ಸಮರ್ಥಿಕೊಂಡ ಕಾರಣದಿಂದಲೇ ಸದನದಲ್ಲಿ ಬ್ಲೂ ಫಿಲಂ ವೀಕ್ಷಣೆಯಂತಹ ಅವಮಾನಕಾರಿ ಕೃತ್ಯ ನಡೆದಿದೆ. ಇನ್ನೂ ಸಮರ್ಥಿಸಿಕೊಂಡಲ್ಲಿ ಬಿಜೆಪಿಯಿಂದ ಬ್ಲೂ ಫಿಲಂ ತಯಾರಿಕಾ ಕೃತ್ಯ ಕೂಡಾ ಆರಂಭವಾಗಬಹುದು ಎಂದು ಕೆಪಿಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಆರೋಪಿಸಿದರು. ಸದಾನಂದ ಗೌಡರು ಮುಖ್ಯಮಂತ್ರಿಯಾಗಿ ಮುಂದುವರಿಯಲು ನೈತಿಕತೆಯನ್ನು ಹೊಂದಿಲ್ಲ. ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ವಿಧಾನಸಭೆಯಿಂದ ಹೊರದಬ್ಬಬೇಕು ಎಂದು ಅವರು ಗುಡುಗಿದರು.
ಬಿಜೆಪಿ ಸರಕಾರ ರಾಜ್ಯದಲ್ಲಿ ಅಧಿಕಾರ ವಹಿಸಿಕೊಂಡ ಆರಂಭದಲ್ಲೇ ಉಡುಪಿಯ ರಘುಪತಿ ಭಟ್ರ ಪತ್ನಿ ಪದ್ಮಪ್ರಿಯಾ ಕೊಲೆ ಪ್ರಕರಣ ನಡೆಯಿತು. ಅಲ್ಲಿಂದೀಚೆಗೆ ಸಚಿವ ಸಂಪುಟದ ಅನೇಕ ಸಚಿವರು ಒಂದಲ್ಲ ಒಂದು ಹಗರಣಗಳಲ್ಲಿ ಭಾಗಿಯಾಗಿದ್ದಾರೆ. ಇದೀಗ ಇಡೀ ಮಹಿಳಾ ಸಮುದಾಯವೇ ತಲೆತಗ್ಗಿಸುವ ಕೆಲಸವನ್ನು ಬಿಜೆಪಿ ಜನಪ್ರತಿನಿಧಿಗಳೆನಿಸಿಕೊಂಡವರು ಮಾಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಗಟ್ಟಿ ದೂರಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications