ಡ್ರಾಪ್ ನೆಪದಲ್ಲಿ ಸಾಫ್ಟ್ ವೇರ್ ಟೆಕ್ಕಿ ದೋಚಿದ್ರು

ವಿಕ್ರಮ್ ಬಳಿ ಇದ್ದ ಲ್ಯಾಪ್ ಟಾಪ್, ಸರ, ಮೊಬೈಲ್, ನಗದು ಹಣ ಎಲ್ಲವನ್ನು ಕಸಿದುಕೊಂಡ ಕಳ್ಳರು ನಂತರ ವಿಕ್ರಮ್ ನನ್ನು ಕಾರಿನಿಂದ ಹೊರಕ್ಕೆ ತಳ್ಳಿದ ಘಟನೆ ಎಚ್ ಎಎಲ್ ವಿಮಾನ ನಿಲ್ದಾಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಐಟಿಪಿಎಲ್ ನಲ್ಲಿ ಖಾಸಗಿ ಸಂಸ್ಥೆಯೊಂದರಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ವಿಕ್ರಮ್ ರಾತ್ರಿ 11.30ರ ಸುಮಾರಿಗೆ ಮನೆಗೆ ಹೊರಟಿದ್ದಾನೆ. ಕ್ಯಾಬ್ ವಾಹನದ್ದಂತ್ತಿದ್ದ ಟಾಟಾ ಇಂಡಿಕಾ ಕಾರು ಈತನ ಬಳಿ ಬಂದ ಕಾರಿನ ಚಾಲಕ ಡ್ರಾಪ್ ಕೊಡುವುದಾಗಿ ಹೇಳಿದ್ದಾನೆ. ಅದನ್ನು ನಂಬಿ ಕಾರು ಹತ್ತಿದ ವಿಕ್ರಮ್ ಗೆ ನಂತರ ಜೊತೆಯಲ್ಲೇ ಕೂತಿರುವವರು ದರೋಡೆಕೋರರು ಎಂಬ ಸಂಶಯ ಮೂಡಿದೆ.
ಈ ಸಮಯದಲ್ಲಿ ಪ್ರತಿಭಟನೆಗೆ ಮುಂದಾದ ವಿಕ್ರಮ್ ಮೇಲೆ ಹಲ್ಲೆ ನಡೆಸಿದ ತಂಡ, ಆತನ ಬಳಿ ಇದ್ದ ವಸ್ತುಗಳನ್ನು ದೋಚಿ, ಎಚ್ಎಎಲ್ ಬಳಿ ಇರುವ ಹೆರಿಟೇಜ್ ಕಂಪನಿ ಬಳಿ ಆತನನ್ನು ತಳ್ಳಿ ಪರಾರಿಯಾಗಿದ್ದಾರೆ.
ಈ ಘಟನೆಯಿಂದ ಕಂಗಾಲಾದ ವಿಕ್ರಮ್ ಎಚ್ ಎಎಲ್ ಠಾಣೆ ಪೊಲೀಸರಿಗೆ ದೂರು ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದರೋಡೆಕೋರರ ಪತ್ತೆಗಾಗಿ ಶೋಧಕಾರ್ಯ ನಡೆಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications