ಸ್ಪೀಕರ್ ಬೋಪಯ್ಯ ನಿರ್ಧಾರಕ್ಕೆ ಬಿಜೆಪಿ ತತ್ತರ

ಬೆಂಗಳೂರು, ಫೆ. 9: ವಿಧಾನಸಭೆಯಲ್ಲೇ ಬ್ಲೂ ಫಿಲಂ ವೀಕ್ಷಿಸಿದವರು ಸದನಕ್ಕೆ ಬಂದರೆ ನಾನು ಒಂದು ಕ್ಷಣವೂ ಸ್ಪೀಕರ್ ಕುರ್ಚಿ ಮೇಲೆ ಕೂರುವುದಿಲ್ಲ. ಯಾರನ್ನು ಬೇಕಾದರೂ ಕೂರಿಸಿಕೊಳ್ಳಿ. ರಾಜೀನಾಮೆ ಕೊಟ್ಟು ಇಲ್ಲಿಂದಲೇ ಹೊರಡುವೆ'- ಹೀಗೆ ಎಚ್ಚರಿಕೆಯ ಮಾತುಗಳನ್ನಾಡಿದ್ದು ಸ್ಪೀಕರ್ ಕೆಜಿ ಬೋಪಯ್ಯ.
'ಅಶ್ಲೀಲ ಚಿತ್ರ ವೀಕ್ಷಿಸಿದ ಪ್ರಕರಣದಿಂದ ನನಗೆ ತುಂಬಾ ನೋವಾಗಿದೆ. ಹೀಗಾಗಿ ಈ ಕೃತ್ಯ ಎಸಗಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ' ಎಂದು ಒತ್ತಡ ಹೇರಲು ಬಂದ ಸರ್ಕಾರದ ಪ್ರಮುಖರಿಗೆ ಎಚ್ಚರಿಕೆಯ ಸಂದೇಶ ನೀಡಿದರು ಎನ್ನಲಾಗಿದೆ.
ಮುಖ್ಯಮಂತ್ರಿ ಡಿವಿ ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ಅಧ್ಯಕ್ಷ ಈಶ್ವರಪ್ಪ, ಸಂಸದೀಯ ವ್ಯವಹಾರಗಳ ಸಚಿವ ಎಸ್ ಸುರೇಶ್ಕುಮಾರ್ ಅವರು ಬುಧವಾರ ಸ್ಪೀಕರ್ ಅವರನ್ನು ಭೇಟಿ ಮಾಡಿ, 'ಸಚಿವರಿಗೆ ಸದನ ಪ್ರವೇಶಕ್ಕೆ ನಿರ್ಬಂಧ ಹೇರುವುದು ಬೇಡ' ಎಂದು ಮನವಿ ಮಾಡಿದರು. ಇದಕ್ಕೆ ಸ್ಪೀಕರ್ ಮಣಿದಿಲ್ಲ. 'ಅವರು (ಆರೋಪಿ ಶಾಸಕರು) ಸದನಕ್ಕೆ ಬರಬೇಕೆನ್ನುವುದಾದರೆ ನಾನು ಸದನಕ್ಕೆ ಬರುವುದಿಲ್ಲ'
'ಆಯ್ಕೆ ನಿಮ್ಮದು. ಸ್ಪೀಕರ್ ಆದ ದಿನದಿಂದ ನನಗೆ ನೆಮ್ಮದಿ ಇಲ್ಲದಂತಾಗಿದೆ. ಈ ವಿಷಯದಲ್ಲಿ ನಿರ್ದಾಕ್ಷಿಣ್ಯ ಕ್ರಮ ಖಚಿತ' ಎಂದು ಹೇಳಿದಾಗ ಆಡಳಿತ ಪಕ್ಷದ ಮುಖಂಡರೇ ದಂಗಾದರು ಎನ್ನಲಾಗಿದೆ. 'ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ವಿಚಾರಣೆ ಪೂರ್ಣವಾಗುವವರೆಗೂ ಮೂವರು ಶಾಸಕರನ್ನು ಸದನದಿಂದ ಹೊರಗಿಡುತ್ತೇನೆ. ಈ ವಿಷಯದಲ್ಲಿ ನನ್ನ ನಿರ್ಧಾರವೇ ಅಚಲ' ಎಂದು ಹೇಳಿ ಆ ನಿರ್ಧಾರವನ್ನು ಪ್ರಕಟಿಸಿದರು ಕೂಡ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications