ನನ್ನ ರಾಜೀನಾಮೆಯಿಂದ ಗೌಡರು ನಿರಾಳ: ಯಡಿಯೂರಪ್ಪ

ದೇವೇಗೌಡ ನಿರಾಳ, ನಿರಾಳ: ಈ ಸಂದರ್ಭದಲ್ಲಿ ಮಾನಾಡಿದ ಯಡಿಯೂರಪ್ಪ, 'ನನ್ನ ಜನಪರ ಆಡಳಿತ ಸಹಿಸದ ಪ್ರತಿಪಕ್ಷಗಳು ನನ್ನ ವಿರುದ್ಧ ಪಿತೂರಿ ನಡೆಸಿತ್ತು. ಹೀಗಾಗಿ ಪಕ್ಷದ ಹಿತದೃಷ್ಟಿಯಿಂದ ನನ್ನ ರಾಜೀನಾಮೆ ಅನಿವಾರ್ಯವಾಗಿತ್ತು' ಎಂದರು. ನಂತರ ಸ್ವಯಂಪ್ರೇರಿತರಾಗಿ 'ನನ್ನ ರಾಜೀನಾಮೆಯ ನಂತರ ದೇವೇಗೌಡರು ನಿರಾಳವಾಗಿದ್ದಾರೆ' ಎಂದೂ ಹೇಳಿದರು.
ಬೆಂಗಳೂರಿನಿಂದ ರೈಲು ಮೂಲಕ ಆಗಮಿಸಿದ ಯಡಿಯೂರಪ್ಪಗೆ ಅಬಕಾರಿ ಸಚಿವ ರೇಣುಕಾಚಾರ್ಯ, ಮಾಜಿ ಸಚಿವರಾದ ಹರತಾಳು ಹಾಲಪ್ಪ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಶಾಸಕರಾದ ಎಚ್ಎಂ ವಿಶ್ವನಾಥ, ಸುರೇಶ್ ಗೌಡ, ಲಕ್ಷ್ಮೀನಾರಾಯಣ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ ನಾಗರಾಜ ಶೆಟ್ಟಿ ಸಾಥ್ ನೀಡಿದರು.
ಸುಬ್ರಹ್ಮಣ್ಯ ರೈಲು ನಿಲ್ದಾಣದಿಂದ ಕಾರಿನಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ತೆರಳಿದ ತಂಡ ಅಲ್ಲಿ ವಿಶೇಷ ಪೂಜೆ ಸಲ್ಲಿಸಿತು. ಬಳಿಕ ಅವರು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿದರು. ಈ ವೇಳೆ ಜರಗುತ್ತಿದ್ದ ಶಿರಾಡಿ ದೈವದ ಕೋಲ ವೀಕ್ಷಿಸಿದ ಯಡಿಯೂರಪ್ಪ ಅಭಯ ಪ್ರಸಾದ ಪಡೆದರು. ನಂತರ ಜೀರ್ಣೋದ್ಧಾರಗೊಳ್ಳುತ್ತಿರುವ ಕೇರ್ಪಡ ಶ್ರೀ ದುರ್ಗಾಪರಮೇಶ್ವರಿ ಮಹಿಷ ಮರ್ದಿನಿ ದೇವಳಕ್ಕೆ ಭೇಟಿ ನೀಡಿದರು.
ಇನ್ನು ಅಬಕಾರಿ ಸಚಿವ ರೇಣುಕಾಚಾರ್ಯ ಅವರು, 'ಸವದಿ ಸದನದಲ್ಲಿ ಮೊಬೈಲ್ ವೀಕ್ಷಿಸಿದ ಘಟನೆಯ ಬಗ್ಗೆ ವಿಪಕ್ಷಗಳು ಸಂಭ್ರಮಿಸುವ ಅಗತ್ಯವಿಲ್ಲ. ವಿಪಕ್ಷಗಳೂ ಕೂಡಾ ಆತ್ಮಾವಲೋಕನ ಮಾಡಿಕೊಳ್ಳಬೇಕು. ಯಾರು ಯಾರು ಎಷ್ಟೆಷ್ಟು ಮದುವೆಯಾಗಿದ್ದಾರೆ ಎನ್ನುವುದೂ ತನಿಖೆಯಾಗಲಿ' ಎಂದು ಆಶಿಸಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications