ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಸಿಬಿಐ ತನಿಖೆ?

ಅಲ್ಲದೇ, ಅದಾನಿ ಎಂಟರ್ಪ್ರೈಸಸ್ ಮತ್ತು ಕೆಲ ಅಧಿಕಾರಿಗಳು ಭಾಗಿಯಾಗಿದ್ದಾರೆನ್ನಲಾದ ಬೇಲಿಕೇರಿ ಬಂದರಿನ ಅದಿರು ಕಣ್ಮರೆ ಪ್ರಕರಣದ ಬಗ್ಗೆ ಕೂಡಾ ಸಿಬಿಐ ತನಿಖೆ ನಡೆಸುವ ಅವಶ್ಯಕತೆ ಇದೆಯೇ ಎಂದು ಪರಿಶೀಲಿಸಿ ಎರಡು ವಾರದೊಳಗೆ ವರದಿ ಸಲ್ಲಿಸುವಂತೆ ಸರ್ವೋಚ್ಚ ನ್ಯಾಯಾಲಯ ಕೇಂದ್ರ ಉನ್ನತಾಧಿಕಾರ ಸಮಿತಿಗೆ ಸೂಚಿಸಿದೆ.
ಅಕ್ರಮವಾಗಿ ಗಣಿ ಗುತ್ತಿಗೆ ಪಡೆಯಲು ಯಡಿಯೂರಪ್ಪ ಅವರ ಕುಟುಂಬಕ್ಕೆ ಸೇರಿದ ಪ್ರೇರಣಾ ಟ್ರಸ್ಟ್ಗೆ ಜಿಂದಾಲ್ ಸ್ಟೀಲ್ ಕಂಪೆನಿ 10 ಕೋಟಿ ರೂ. ಲಂಚ ನೀಡಿದೆ ಮತ್ತು ಅವರ ಕುಟುಂಬಕ್ಕೆ ಸೇರಿದ್ದ ಜಮೀನನನ್ನು ಅದರ ನೈಜ ಮೌಲ್ಯಕ್ಕಿಂತ ಹೆಚ್ಚಿನ ಬೆಲೆ ನೀಡಿ ಖರೀದಿಸಿದೆ. ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಎಸ್ ಆರ್ ಹಿರೇಮಠ್ ಜ.16ರಂದು ಸರ್ವೋಚ್ಚಯ ನ್ಯಾಯಾಲಯದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.












Click it and Unblock the Notifications