ಕುಮಾರಸ್ವಾಮಿಗೆ ಹಿನ್ನಡೆ: ಸುಪ್ರೀಂ ತುರ್ತು ನೋಟಿಸ್

ಇದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ದ್ವಿಸದಸ್ಯ ಪೀಠ, ಕುಮಾರಸ್ವಾಮಿಯವರಿಗೆ ನೊಟೀಸ್ ಜಾರಿಗೊಳಿಸಿದ್ದು, ನೋಟಿಸ್ಗೆ ಉತ್ತರಿಸಲು ನಾಲ್ಕು ವಾರಗಳ ಗಡುವು ನೀಡಿದೆ.
ಈ ಮಧ್ಯೆ, ತಮ್ಮ ವಿರುದ್ಧದ ಅಕ್ರಮ ಗಣಿ ಆರೋಪಗಳ ಕುರಿತು ಸುಪ್ರೀಮ್ ಕೋರ್ಟ್ ನೋಟಿಸ್ ನೀಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೋರ್ಟ್ ನೋಟಿಸ್ ನೀಡಿರುವುದರಿಂದ ತಮ್ಮ ರಾಜಕೀಯ ಭವಿಷ್ಯಕ್ಕೆ ಏನೂ ತೊಂದರೆಯಿಲ್ಲ. ಇದು ಬಿಜೆಪಿ ಸರಕಾರದ ಷಡ್ಯಂತರ. ನ್ಯಾಯಾಲಯದಲ್ಲಿ ಹೋರಾಡಿ, ನಾನೇನು ತಪ್ಪು ಮಾಡಿಲ್ಲ ಎಂಬುದನ್ನು ಸಾಬೀತುಪಡಿಸುವೆ ಎಂದಿದ್ದಾರೆ.
ಕಳೆದ ನವೆಂಬರ್ನಲ್ಲಿ ವಿಶ್ವ ಭಾರತಿ ಹೌಸಿಂಗ್ ಕೋ ಆಪರೇಟಿ ಸೊಸೈಟಿನಲ್ಲಿ ಅಕ್ರಮ ನಿವೇಶನ ಹಂಚಿಕೆ ಹಾಗೂ ಜಂತಕಲ್ ಗಣಿಗಾರಿಕೆ ಗುತ್ತಿಗೆ ನವೀಕರಣ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಅವರ ಪತ್ನಿ ಮಧುಗಿರಿ ಶಾಸಕಿ ಅನಿತಾ ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಸುವಂತೆ ಕೋರಿ ವಿನೋದ್ ಕುಮಾರ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.












Click it and Unblock the Notifications