ಸಜ್ಜನ ರಾಜಕಾರಣಿ ವಿ.ಎಸ್. ಆಚಾರ್ಯ ಹಠಾತ್ ನಿಧನ

ನಗರದ ನೃಪತುಂಗ ರಸ್ತೆಯಲ್ಲಿರುವ ಕಲೆ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಡೆದ ಸಮಾರಂಭವೊಂದರಲ್ಲಿ ಭಾಗವಹಿಸುತ್ತಿದ್ದಾಗ ವೇದಿಕೆಯಲ್ಲಿಯೇ ಅವರು ಕುಸಿದುಬಿದ್ದಿದ್ದರು. ಅವರನ್ನು ಕೂಡಲೆ ಕ್ರೆಸೆಂಟ್ ರಸ್ತೆಯಲ್ಲಿರುವ ಮಲ್ಲಿಗೆ ನರ್ಸಿಂಗ್ ಹೋಂಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಚಾರ್ಯ ಅವರು ತೀರಿಕೊಂಡಿದ್ದಾರೆ.
ವಿ.ಎಸ್. ಆಚಾರ್ಯ ಅವರು ಇಂದು ಮಧ್ಯಾಹ್ನವೇ ಮಂಗಳೂರಿನಿಂದ ವಿಮಾನದಲ್ಲಿ ಬೆಂಗಳೂರಿಗೆ ಮರಳಿದ್ದರು. ಅಲ್ಲಿಂದ ನೇರವಾಗಿ ಅವರು ಕಾರ್ಯಕ್ರಮಕ್ಕೆ ಬಂದಿದ್ದರು. ಅಲ್ಲಿ ವೇದಿಕೆ ಏರುವಾಗ ಕುಸಿದುಬಿದ್ದಿದ್ದಾರೆ. ಕೊನೆಗೆ ಮಧ್ಯಾಹ್ನ 1.15ರ ಸುಮಾರಿಗೆ ಅವರು ಅಸುನೀಗಿದರು. ಅವರ ಪಾರ್ಥೀವ ಶರೀರವನ್ನು ರೇಸ್ಕೋರ್ಸ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಇಡಲಾಗಿತ್ತು. ಅಲ್ಲಿ ಅವರಿಗೆ ಸಕಲ ಸರಕಾರಿ ವಂದನೆ ಸಲ್ಲಿಸಲಾಯಿತು. ಎಲ್ಲ ರಾಜಕಾರಣಿಗಳು ಬಂದು ಅಂತಿಮ ನಮನ ಸಲ್ಲಿಸಿದರು. [ನೆನಪಿನ ಪುಟಗಳಲ್ಲಿ ವಿಎಸ್ ಆಚಾರ್ಯ]
ಗಣ್ಯರ ಕಂಬನಿ : ಆಚಾರ್ಯ ಅವರ ಸಾವು ಬಿಜೆಪಿ ಪಾಲಿಗೆ ತುಂಬಲಾರದ ನಷ್ಟ. ಅವರು ಎಲ್ಲ ರಾಜಕಾರಣಿಗಳಿಗೆ ಮಾರ್ಗದರ್ಶಿಗಳಾಗಿದ್ದರು. ಅವರ ಸ್ಥಾನವನ್ನು ತುಂಬುವುದು ಕಷ್ಟಕರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರು ಕಂಬನಿ ಮಿಡಿದಿದ್ದಾರೆ. ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಮಲ್ಲಿಗೆ ಆಸ್ಪತ್ರೆಗೆ ಧಾವಿಸಿದ್ದಾರೆ.
ಉಡುಪಿಯಲ್ಲಿ ಅಂತ್ಯ ಸಂಸ್ಕಾರ : ಮಧ್ಯಾಹ್ನ ಆಚಾರ್ಯ ಅವರ ಪಾರ್ಥೀವ ಶರೀರವನ್ನು ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಕೊಂಡೊಯ್ಯಲಾಗುತ್ತಿದೆ. ಅಲ್ಲಿಂದ ರಸ್ತೆಯ ಮುಖಾಂತರ ಉಡುಪಿಗೆ ತೆಗೆದುಕೊಂಡು ಹೋಗಿ, ಬೈಲಕೆರೆಯಲ್ಲಿರುವ ಅವರ ಸ್ವಂತ ನಿವಾಸಕ್ಕೆ ಒಯ್ಯಲಾಗುವುದು. ನಂತರ ಫೆ.14ರ ಸಂಜೆ ಬೀಡಿನಗುಡ್ಡೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಶೋಕಾಚರಣೆ : ಆಚಾರ್ಯ ಅವರ ಗೌರವಾರ್ಥವಾಗಿ ರಾಜ್ಯದಲ್ಲಿ ಎರಡು ದಿನಗಳ ಶೋಕಾಚರಣೆ ನಡೆಸಲು ರಾಜ್ಯ ಸರಕಾರ ನಿರ್ಣಯಿಸಿದೆ. ಉಡುಪಿ ಜಿಲ್ಲೆಯಲ್ಲಿ ಎರಡು ದಿನ ಶಾಲಾ ಕಾಲೇಜುಗಳಿಗೆ ರಜಾ ಘೋಷಣೆ ಮಾಡಲಾಗಿದೆ. ಉಡುಪಿಯ ಡಿಸಿ ಕಚೇರಿ 'ರಜತಾದ್ರಿ'ಯಲ್ಲಿ ಸಂಜೆ 5ರಿಂದ 8ರವರೆಗೆ ಸಾರ್ವಜನಿಕರಿಗೆ ಆಚಾರ್ಯ ಅವರ ಅಂತಿಮ ದರ್ಶನ ಪಡೆಯಲು ಅವಕಾಶ ಮಾಡಿಕೊಡಲಾಗುತ್ತಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications