ನಾ ಕಂಡಂತೆ ಉಡುಪಿ ಮಣ್ಣಿನಮಗ ಆಚಾರ್ಯ
ಆಚಾರ್ಯರು ಸಜ್ಜನ, ಮೃದುಭಾಷಿ. ಹೆಚ್ಚು ಕೆಲಸ, ಕಡಿಮೆ ಗದ್ದಲ ಅವರ ಸ್ವಭಾವ. ಅವರ ಉಡುಪಿಯಲ್ಲಿನ ಮನೆ ನನ್ನ ಮನೆಗಿಂತ ಕೂಗಳೆತೆಯ ದೂರದಲ್ಲಿದೆ. ಅದೆಷ್ಟೋ ಬಾರಿ ನಾನು ಅವರ ಮನೆಗೆ ಹೋಗಿದ್ದೆ. ಅವರು ಯಾರೇ ಮನೆಗೆ ಬರಲಿ ತೋರಿಸುತ್ತಿದ್ದ ಪ್ರೀತಿ ನನ್ನ ಮನಸಿನಲ್ಲಿ ಅಚ್ಚಳಿಯದಂತೆ ಮನೆಮಾಡಿದೆ.
ನನ್ನ ತಂದೆ ಮತ್ತು ಅಜ್ಜನ ಜೊತೆ ಉತ್ತಮ ಸಂಬಂಧ ಹೊಂದಿದ್ದ ಆಚಾರ್ಯ ಕೆಲಸ ಇಲ್ಲದೆ ಮನೆಯಲ್ಲಿ ಚಿಂತಿಸಿಕೊಂಡು ಕೂತಿದ್ದ ನನ್ನ ಮೊದಲ ಸಹೋದರನಿಗೆ ಕರ್ನಾಟಕ ಬ್ಯಾಂಕ್ ನಲ್ಲಿ ಕೆಲಸ ಕೊಡಿಸಿದ್ದರು. ಉಡುಪಿ ಜಿಲ್ಲೆಯಲ್ಲಿ ಅದೆಷ್ಟೋ ಕುಟುಂಬಗಳಿಗೆ ಆಚಾರ್ಯ ಅವರು ಮಾಡಿದ ಸಹಾಯಹಸ್ತ ಬೆಲೆಕಟ್ಟದಷ್ಟು. ನಮ್ಮ ಮತ್ತು ಆಚಾರ್ಯ ಕುಟುಂಬದಲ್ಲಿ ಯಾವುದೇ ಸಮಾರಂಭಗಳು ನಡೆದರೂ ಎರಡೂ ಕುಟುಂಬದ ಸದಸ್ಯರು ತಪ್ಪದೆ ಹಾಜರಾಗುತ್ತಿದ್ದೆವು.
ಯಾವುದೇ ಕಳಂಕವಿಲ್ಲದೆ, ಎಲ್ಲರ ಜೊತೆ ಹೊಂದಿಕೊಂಡು ಬಾಳುತ್ತಿದ್ದ ಆಚಾರ್ಯ ಅವರ ಬಗ್ಗೆ ಬರೆಯಲು ಶುರು ಮಾಡಿದರೆ ಪುಟಗಳೇ ಸಾಲದು. ಉಡುಪಿ ಜಿಲ್ಲೆಯ ಹೆಚ್ಚಿನ ದೇವಾಲಯಗಳಿಗೆ ಗೌರವ ಅಧ್ಯಕ್ಷರಾಗಿರುವ ಆಚಾರ್ಯ ದೇವಾಲಯದ ಅಭಿವೃದ್ದಿಗೆ ಬಹಳಷ್ಟು ಶ್ರಮಿಸಿದ್ದರು. ಸ್ವಾಮೀಜಿಗಳು ಕೂಡ ಇವರ ಮಾತಿಗೆ ಬೆಲೆ ನೀಡುತ್ತಿದ್ದರು.
ತಾವು ನಂಬಿದ್ದ ಸಿದ್ದಾಂತವನ್ನು ಎಂದೂ ಬಿಟ್ಟು ಕೊಡದ ಆಚಾರ್ಯ ಮಲ್ಪೆ ಸಮುದ್ರಕ್ಕೆ ಹೋಗುವ ದಾರಿಯಲ್ಲಿರುವ ಕಲ್ಮಾಡಿ ಎನ್ನುವ ಸ್ಥಳದಲ್ಲಿ ಕ್ಲಿನಿಕ್ ಸ್ಥಾಪಿಸಿ ಬಡ ಜನತೆಗೆ ವೈದ್ಯಕೀಯ ಸೇವೆಯನ್ನೂ ನೀಡುತ್ತಿದ್ದರು. ಬಡ ಕುಟುಂಬಗಳಿಗೆ ಆಸ್ಪತ್ರೆಯ ಬಿಲ್ ನೀಡಲು ಕೈಲಾದಷ್ಟು ಸಹಾಯ ಮಾಡುತ್ತಿದ್ದನ್ನು ನಾನು ಬಲ್ಲೆ.
ಈ ರಾಜ್ಯ ಕಂಡ ಒಬ್ಬ ಸಜ್ಜನ ರಾಜಕಾರಿಣಿ, ಅದಕ್ಕಿಂತ ಹೆಚ್ಚಾಗಿ ಒಬ್ಬ ಒಳ್ಳೆಯ ಮನುಷ್ಯನನ್ನು ಈ ರಾಜ್ಯ ಕಳೆದುಕೊಂಡಿದೆ. ಅಗಲಿದ ಆಚಾರ್ಯ ಅವರ ಆತ್ಮಕ್ಕೆ ದೇವರು ಚಿರಶಾಂತಿ ಕೊಡಲಿ ಮತ್ತು ಅವರ ಪತ್ನಿ ಶಾಂತಾ ಮತ್ತು ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ಕೊಡಲಿ ಎನ್ನುವುದು ನನ್ನ ಪ್ರಾರ್ಥನೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ













Click it and Unblock the Notifications