ಬಿಜೆಪಿಯ 'ದೇವರು' ಆಚಾರ್ಯ ಸಾವಿಗೆ ಗಣ್ಯರ ಕಂಬನಿ

ಸದಾನಂದ ಗೌಡ : ಅವರು ಸಾವಿನ ವಿಷಯ ತಿಳಿಯುತ್ತಿದ್ದಂತೆ ಮಲ್ಲಿಗೆ ಆಸ್ಪತ್ರೆಗೆ ಧಾವಿಸಿದ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಆಚಾರ್ಯ ಸಾವಿಗೆ ಕಣ್ಣೀರುಗರೆದಿದ್ದಾರೆ. "ಬಿಜೆಪಿ ಪಕ್ಷಕ್ಕೆ ಆಚಾರ್ಯ ಅವರು 'ದೇವರಿದ್ದಂತೆ'. ಅವರು ಹಾಕಿಕೊಟ್ಟ ರಾಜನೀತಿ ಪ್ರಾಯಶಃ ಅದ್ಭುತ. ಅವರು ನಮ್ಮೊಟ್ಟಿಗಿಲ್ಲದಿದ್ದರೂ ಅವರ ನಿರಂತರ ಮರ್ಗದರ್ಶನ ಬೇಕೇಬೇಕು. ಅದು ಯಾವ ರೀತಿ ಮತ್ತು ಹೇಗೆ ದೊರೆಯುತ್ತದೋ, ಯಾರ ಮುಖಾಂತರ ದೊರೆಯುತ್ತದೋ ಗೊತ್ತಿಲ್ಲ. ಬಿಜೆಪಿಯ ಎಲ್ಲ ಚುನಾವಣಾ ಪ್ರಣಾಳಿಕೆಗಳನ್ನು ಮಾಡಿದ್ದು ಆಚಾರ್ಯ ಅವರೇ. ಅತ್ಯಂತ ದೊಡ್ಡ ವಸ್ತುವನ್ನು ಇಂದು ಕಳೆದುಕೊಂಡಿದ್ದೇನೆ. ಬಜೆಟ್ ಮಂಡನೆಗಾಗಿ ಹತ್ತು ದಿನಗಳ ಸಮಯ ಕೊಡುತ್ತೇನೆಂದು ಹೇಳಿದ್ದರು. ಸಮಯ ಇನ್ನೆಲ್ಲಿ ಕೊಡುತ್ತಾರೆ" ಎಂದು ಗದ್ಗದಿತರಾಗಿ ಗಳಗಳನೆ ಗೌಡರು ಅತ್ತಿದ್ದಾರೆ.
ಸಿದ್ದರಾಮಯ್ಯ : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, "ಆಚಾರ್ಯ ಅವರು ಸಜ್ಜನ ವಿಚಾರವಂತ ರಾಜಕಾರಣಿ, ಸೌಮ್ಯ ಸ್ವಭಾವದ ವ್ಯಕ್ತಿ. ಉಡುಪಿಯಲ್ಲಿ ವೈದ್ಯರಾಗಿದ್ದರೂ ರಾಜಕೀಯ ಪ್ರವೇಶ ಮಾಡಿ ದೀರ್ಘ ಕಾಲ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದರು. ಕೆಳಮನೆ, ಮೇಲ್ಮನೆಗೆ ಆಯ್ಕೆಯಾಗಿ ಮಂತ್ರಿಯಾಗಿ, ರಾಜ್ಯದಲ್ಲಿ ನಿಸ್ವಾರ್ಥ ಸೇವೆ ಮಾಡಿರುವಂಥ ಪ್ರಾಮಾಣಿಕ ರಾಜಕಾರಣಿಗಳಲ್ಲಿ ಆಚಾರ್ಯ ಅವರೂ ಒಬ್ಬರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ" ಎಂದು ಆಚಾರ್ಯ ಅವರ ವ್ಯಕ್ತಿತ್ವವನ್ನು ಹೊಗಳಿದ್ದಾರೆ.
ಪೇಜಾವರ ಶ್ರೀ : ಆಚಾರ್ಯ ಅವರೊಂದಿಗೆ ದೀರ್ಘಕಾಲದ ಒಡನಾಟ ಹೊಂದಿದ್ದ ಪೇಜಾವರ ಶ್ರೀಗಳಾದ ವಿಶ್ವೇಶ ತೀರ್ಥ ಸ್ವಾಮೀಜಿ ಅವರು, "ಕರ್ನಾಟಕದ ಕರಾವಳಿ ಕಂಡ ಅತ್ಯಂತ ನಿಷ್ಕಳಂಕ ರಾಜಕಾರಣಿ ಆಚಾರ್ಯ ಅವರು. ರಾಜ್ಯದ ಔದ್ಯಮಿಕ ಪ್ರಗತಿಯ ಬಗ್ಗೆ ಸದಾ ಚಿಂತಿಸುತ್ತಿದ್ದರು. ವಿರೋಧ ಪಕ್ಷಗಳು ಕೂಡ ಅವರ ಸೇವೆಯನ್ನು ಶ್ಲಾಘಿಸುತ್ತಿದ್ದವು. ಭಗವಂತ ಅವರ ಕುಟುಂಬದವರಿಗೆ ದುಃಖ ಭರಿಸುವಂಥ ಶಕ್ತಿ ನೀಡಲಿ" ಎಂದು ನುಡಿದಿದ್ದಾರೆ.
ಡಿ.ಎಚ್. ಶಂಕರಮೂರ್ತಿ : ಆಚಾರ್ಯ ಅವರೊಂದಿಗೆ ಹೋಗೋ ಬಾರೋ ಗೆಳೆತನ ಹೊಂದಿದ್ದ ವಿಧಾನಪರಿಷತ್ ಅಧ್ಯಕ್ಷ ಡಿ.ಎಚ್. ಶಂಕರಮೂರ್ತಿ ಅವರು ತಮ್ಮ ಆತ್ಮೀಯ ಗೆಳೆಯನ್ನು ಕಳೆದುಕೊಂಡಿದ್ದಕ್ಕೆ ಕಂಬನಿ ಮಿಡಿದಿದ್ದಾರೆ. "ನಮ್ಮದು ದಶಕಗಳು ಸ್ನೇಹ. ಆತ ನನ್ನನ್ನು ಶಂಕರೂ ಅಂತಲೇ ಕರೆಯುತ್ತಿದ್ದ. ಇನ್ನೂ ಅಷ್ಟು ಆತ್ಮೀಯವಾಗಿ, ಏಕವಚನದಲ್ಲಿ ಕರೆಯುವವರು ಯಾರು?" ಎಂದು ಶಂಕರಮೂರ್ತಿಯವರು ಭಾವುಕರಾಗಿ ಹೇಳಿದ್ದಾರೆ.
ಆರ್ ಅಶೋಕ್ : ಗೃಹ ಸಚಿವ ಆರ್. ಅಶೋಕ್ ಅವರು ಮಾಜಿ ಗೃಹ ಸಚಿವ ವಿ.ಎಸ್. ಆಚಾರ್ಯ ಅವರ ಸಾವಿಗೆ ಅಶ್ರುತರ್ಪಣ ನೀಡಿದ್ದು, "ಅವರ ಸಾವಿನಿಂದ ಬಿಜೆಪಿ ಪಕ್ಷಕ್ಕೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಅತ್ಯಂತ ನೋವಿನ ಸಂಗತಿ. ಅವರು ತೀರಿಹೋಗಿರುವಂಥದ್ದು ನಂಬಲು ಸಾಧ್ಯವಾಗದ ಸಂಗತಿ. ರಾಜಕೀಯದಲ್ಲಿ ಅವರು ಯಡಿಯೂರಪ್ಪನವರಿಗಿಂತ ಹಿರಿಯರಾಗಿದ್ದರು ಮತ್ತು ದಕ್ಷಿಣ ಭಾರತದಲ್ಲಿ ಬಿಜೆಪಿ ಸರಕಾರ ಬರಲು ಸಾಕಷ್ಟು ಶ್ರಮಿಸಿದ್ದರು. ಅವರ ಸಾವು ತೀವ್ರ ದುಃಖ ತಂದಿದೆ" ಎಂದಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications