ಆಚಾರ್ಯರಿಗೆ ಶಾಪಗ್ರಸ್ತ ದೇವರ ಖಾತೆ ಮುಳುವಾಯಿತೇ?

ಆಗಿನ ಗೃಹ ಸಚಿವರಾಗಿದ್ದ ವಿಎಸ್ ಆಚಾರ್ಯ ಅವರು ಸಂತೋಷದಿಂದ ಶಾಪಗ್ರಸ್ತ ದೇವರ ಉತ್ಸವವನ್ನು ಹೊತ್ತುಕೊಳ್ಳಲು ಸಿದ್ಧರಾದರು.
ಇದಕ್ಕೂ ಮುನ್ನ ಆ ಖಾತೆಯನ್ನು ಹೊಂದಿದ್ದ ವಿ ಸೋಮಣ್ಣ ಉಪಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದರು. ವೈದ್ಯ ಶಿಕ್ಷಣ ಸಚಿವರಾಗಿದ್ದ ರಾಮಚಂದ್ರೇಗೌಡರು ಮುಜರಾಯಿ ಖಾತೆ ಒಲ್ಲೆ ಎಂದರು.
ಹೆಚ್ಚು ದಿನ ಖಾತೆಯನ್ನು ಇಟ್ಟುಕೊಳ್ಳಲು ಹೆದರಿದ ಯಡಿಯೂರಪ್ಪ ಅವರು ತರಾತುರಿಯಲ್ಲಿ ಆಚಾರ್ಯರ ಹೆಗಲಿಗೆ ದೇವರ ಭಾರವನ್ನು ಹೊರೆಸಿದರು.
ಮುಜರಾಯಿ ಖಾತೆ ವಹಿಸಿಕೊಂಡ ಸಚಿವರುಗಳು ನಂತರದ ಚುನಾವಣೆಯಲ್ಲಿ ಸೋಲುಂಡ ಸಂಪ್ರದಾಯಗಳು ಬೆಳೆದು ಬಂದಿದೆ.
ಕುಮಾರಸ್ವಾಮಿ ಸರಕಾರದಲ್ಲಿ ಮುಜರಾಯಿ ಸಚಿವರಾಗಿದ್ದ ನಾಗರಾಜ ಶೆಟ್ಟಿ, ಇದಕ್ಕೂ ಮೊದಲು ಈ ಖಾತೆ ವಹಿಸಿಕೊಂಡಿದ್ದ ಸುಮಾ ವಸಂತ್, ಎಂಪಿ ಪ್ರಕಾಶ್ ನಂತರದ ಚುನಾವಣೆಯಲ್ಲಿ ಸೋಲುಂಡಿದ್ದರು. ಈ ಸಂಪ್ರದಾಯಕ್ಕೆ ಇತ್ತೀಚಿನ ಉದಾಹರಣೆಯೆಂದರೆ
ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರಿ, ಈ ಖಾತೆ ವಹಿಸಿಕೊಂಡು ನಂತರದ ಚುನಾವಣೆಯಲ್ಲಿ ಗೋವಿಂದರಾಜನಗರದಿಂದ ಸ್ಪರ್ಧಿಸಿ ಸೋತಿದ್ದು 'ಸೋಲಿಲ್ಲದ ಸರದಾರ' ವಿ ಸೋಮಣ್ಣ.
ನಂತರ ಈ ಖಾತೆ ಭಾರ ಹೊತ್ತವರು ಏಡುಕುಂಡಲವಾದ ವೆಂಕಟರಮಣ ಗೋವಿಂದ ಎನ್ನುವ ಮಾಲೂರು ಕೃಷ್ಣಯ್ಯ ಶೆಟ್ಟರು.. ಶೆಟ್ರು ಪಾಪ ಜೈಲುವಾಸ ಕೂಡಾ ಕಂಡರು.
ಕೊನೆಗೆ ಮತ್ತೊಮ್ಮೆ ಉನ್ನತ ಶಿಕ್ಷಣ ಸಚಿವರಾಗಿದ್ದ ಆಚಾರ್ಯ ಅವರ ಹೆಗಲಿಗೆ ಈ ಬೇಡದ ದೇವರ ಖಾತೆ ಬಿತ್ತು.ಆದರೆ, ಈ ಖಾತೆ, ದೇವರ ಸೇವೆ ಯಾವುದೂ ಅವರ ಸಾವನ್ನು ತಡೆಯಲು ಆಗಲಿಲ್ಲ. ಮುಜರಾಯಿ ಖಾತೆ ಹೊಂದಿರುವ ಸಚಿವರಿಗೆ ಒಳ್ಳೆ ಯೋಗವಿಲ್ಲ ಎಂಬ ಮಾತು ಕಾಕತಾಳೀಯವಾಗಿಯಾದರೂ ನಿಜವಾಗುತ್ತಿರುವುದು ಸುಳ್ಳಲ್ಲ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications