ಜನಾ ರೆಡ್ಡಿ ಜೈಲುವಾಸ ಇನ್ನೂ ದೀರ್ಘ ದೀರ್ಘ

ಆದರೆ ಸಿಬಿಐ... 'ಆರ್ಥಿಕ ಭಯೋತ್ಪಾದಕ' ಜನಾರ್ದನ ರೆಡ್ಡಿಗೆ ಯಾವುದೇ ಕಾರಣಕ್ಕೂ ಜೈಲಿನಿಂದ ಹೊರಬಾರದಂತೆ 'ನೋಡಿಕೊಳ್ಳುತ್ತಿದೆ'. ರೆಡ್ಡಿಯನ್ನು ಹಾಗಿರಲಿ ಅವರ ಐಷಾರಾಮಿ ವಸ್ತುಗಳನ್ನೂ ವಾಪಸ್ ಕೊಡಲು ಸಿಬಿಐಗೆ ಮನಸ್ಸಿಲ್ಲ. ನನ್ನ ರುಕ್ಮಿಣಿಯನ್ನು (ಹೆಲಿಕಾಪ್ಟರ್) ವಾಪಸ್ ಕೊಡಿ ಎಂದು ರೆಡ್ಡಿ ಕೇಳಿದರೆ 'ರುಕ್ಮಿಣಿಯನ್ನು ನಾವು ಚೆನ್ನಾಗಿಯೇ ನೋಡಿಕೊಳ್ಳುತ್ತಿದ್ದೇವೆ. ರೆಡ್ಡಿಗೆ ಅದರ ಚಿಂತೆ ಬೇಡ' ಎಂದು ಖಡಕ್ಕಾಗಿ ಹೇಳಿದೆ.
ಈ ಮಧ್ಯೆ, ಎಮ್ಮಾರ್ ಟೌನ್ ಷಿಪ್ ಪ್ರಕರಣದಲ್ಲಿ ಆರೋಪಿಯಾಗಿರುವ ಆಂಧ್ರಪ್ರದೇಶ ಗೃಹ ಕಾರ್ಯದರ್ಶಿ ಬಿಪಿ ಆಚಾರ್ಯ ಅವರ ಚಂಚಲಗೂಡ ಜೈಲುವಾಸ ಅವಧಿಯನ್ನು ವಿಸ್ತರಿಸಲಾಗಿದೆ.
ಇದಕ್ಕೆಲ್ಲಕ್ಕಿಂತ ಗಹನವಾದ ವಿಚಾರವೆಂದರೆ ಸಿಬಿಐ ಅಧಿಪತಿ ವಿವಿ ಲಕ್ಷ್ಮಿನಾರಾಯಣ ಅವರ ಕೈಮೇಲಾಗಿರುವುದು. ಅವರೀಗ ನರೇಂದ್ರ ಮೋದಿ ಸಾಹೇಬರ ಕೊರಳಿಗೇ ಗಂಟುಬಿದ್ದಿದ್ದಾರೆ. ಮೋದಿಗೆ ಉರುಳಾಗಬಹುದಾದ ಷೊಹ್ರಾಬುದ್ದೀನ್ ಶೇಕ್ ನಕಲಿ ಎನಕೌಂಟರ್ ಪ್ರಕರಣದ ತನಿಖೆ ನಡೆಸುವಂತೆ ಆಂಧ್ರದ ಸಿಬಿಐ ಜಂಟಿ ನಿರ್ದೇಶಕರಾಗಿರುವ ಲಕ್ಷ್ಮಿನಾರಾಯಣಗೆ ದೆಹಲಿ ಸಿಬಿಐ ಆದೇಶಿಸಿದೆ. ಸುಪ್ರೀಂಕೋರ್ಟ್ ಸುಪರ್ದಿಯಲ್ಲಿ ಈ ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ ಸಿಬಿಐ ತನಿಖೆಗೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ.
ಈಗಾಗಲೇ ಜಗನ್ ಮೋಹನ್ ರೆಡ್ಡಿ ಅಕ್ರಮ ಆಸ್ತಿ, ಎಮ್ಮಾರ್ ಟೌನ್ ಷಿಪ್ ಹಗರಣಗಳ ಬೆನ್ನುಹತ್ತಿರುವ ಲಕ್ಷ್ಮಿನಾರಾಯಣ ಸಾಹೇಬರೇ ಖುದ್ದು ಎಲ್ಲ ಪ್ರಕರಣಗಳನ್ನೂ ನಿಭಾಯಿಸಬೇಕಾಗಿದೆ. ಅಲ್ಲಿಗೆ ಒಂದೇ ಪ್ರಕರಣವನ್ನು ಒಂದೇ ಸಮನೆ ತನಿಖೆ ನಡೆಸುವುದು ಅವರಿಗೆ ಕಷ್ಟಸಾಧ್ಯವಾಗಲಿದೆ. ಆದ್ದರಿಂದ ಓಬಳಾಪುರಂ ರೆಡ್ಡಿ ಪ್ರಕರಣ ವಿಚಾರಣೆ ನಿಧಾನಗತಿಯಲ್ಲಿ ಸಾಗಲಿದೆ. ಅಂದರೆ ರೆಡ್ಡಿ ಜೈಲುವಾಸ .............
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications