ರೆಡ್ಡಿ ಹೆಲಿಕಾಪ್ಟರ್, ಕಾರು ವಾಪಸಿಗೆ ಸಿಬಿಐ ಬ್ರೇಕ್

'ಹೆಲಿಕಾಪ್ಟರ್, ಐಷಾರಾಮಿ ಕಾರುಗಳನ್ನು ಬಳಸದಿದ್ದರೆ ಅವು ತುಕ್ಕು ಹಿಡಿಯುತ್ತವೆ ಎಂಬ ರೆಡ್ಡಿ ವಾದದಲ್ಲಿ ಹುರುಳಿಲ್ಲ. ಅವುಗಳನ್ನೆಲ್ಲ ಸುಸ್ಥಿತಿಯಲ್ಲಿಡಲಾಗಿದೆ. ಹೆಲಿಕಾಪ್ಟರ್ ಬೆಂಗಳೂರಿನಲ್ಲೂ, ಕಾರುಗಳು ಬಳ್ಳಾರಿಯಲ್ಲಿ ಸುಭದ್ರವಾಗಿವೆ. ರೆಡ್ಡಿಗೆ ಯಾವುದೇ ಆತಂಕ ಬೇಡ' ಎಂದು ಸಿಬಿಐ ನ್ಯಾಯಾಲಯದ ಗಮನ ಸೆಳೆದಿದೆ.
'ಅದಕ್ಕಿಂತ ಮುಖ್ಯವಾಗಿ ಈ ವಾಹನಗಳನ್ನು ವಾಪಾಸು ಮಾಡುತ್ತಿದ್ದಂತೆ ರೆಡ್ಡಿ ಅದನ್ನು ಮಾರಿಬಿಡುವ ಸಾಧ್ಯತೆ ಇದೆ. ಒಂದು ವೇಳೆ ಅವು ಮಾರಾಟಗೊಂಡರೆ ಮುಂದಿನ ವಿಚಾರಣೆ ಹಂತಗಳಲ್ಲಿ ಖರೀದಿದಾರರನ್ನೂ ಮೂರನೇ ಪಾರ್ಟಿಯನ್ನಾಗಿ ಮಾಡಬೇಕಾಗುತ್ತದೆ. ಅದು ರಗಳೆಯಾಗುತ್ತದೆ' ಎಂದು ಸಿಬಿಐ ಬ್ರೇಕ್ ಹಾಕಿದೆ.
ಗಮನಾರ್ಹವೆಂದರೆ 'ಆರ್ಥಿಕ ಭಯೋತ್ಪಾದಕ' ಜನಾರ್ದನ ರೆಡ್ಡಿ ಇವುಗಳನ್ನೆಲ್ಲ ಖರೀಸಿದ್ದು ಅಕ್ರಮ ಗಣಿಗಾರಿಕೆಯಿಂದ ಹರಿದುಬಂದ ಹಣದಿಂದ. ಅಷ್ಟಕ್ಕೂ ಹೆಲಿಕಾಪ್ಟರ್ ಓಬಳಾಪುರಂ ಮೈನಿಂಗ್ ಕಂಪನಿಯ ಹೆಸರಿನಲ್ಲಿರುವುದು. ಇನ್ನು ಒಂದು ಕಾರಂತೂ ಇನ್ನೂ ನೋಂದಣಿಯೂ ಆಗಿಲ್ಲ' ಎಂದು ರೆಡ್ಡಿ ಅರ್ಜಿಯನ್ನು ವಿರೋಧಿಸಿ ಸಿಬಿಐ ವಾದ ಮಂಡಿಸಿದೆ.
ಹೀಗೆ ಅಕ್ರಮ ಗಣಿಗಾರಿಕೆಯಿಂದ ಹರಿದುಬಂದ ಹಣದಿಂದ ಖರೀದಿಸಲಾಗಿದೆ. ತಾನು ದಾಖಲಿಸಿರುವ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದ ಮುಖ್ಯ ವಿಚಾರವೇ ಈ ಹಣ. ಆದ್ದರಿಂದ ಕೇಸು ಮುಗಿಯುವವರೆಗೂ ವಾಹನಗಳನ್ನು ವಾಪಸು ಮಾಡಬಾರದು ಎಂದು ಸಿಬಿಐ ಬಲವಾಗಿ ಸಮರ್ಥಿಸಿಕೊಂಡಿತು. ವಿಚಾರಣೆಯನ್ನು ಫೆ. 22ಕ್ಕೆ ಮುಂದೂಡಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications