ಕರ್ನಾಟಕ ಬ್ಯಾಂಕ್ ಸಂಸ್ಥಾಪಕರ ದಿನ ಫೆ 18

ಆರ್ ಬಿಐ ಮಾಜಿ ಡೆಪ್ಯುಟಿ ಗವರ್ನರ್ ಉಷಾ ಥೊರಟ್ ಅವರು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಬ್ಯಾಂಕಿಂಗ್ ಸ್ಥಿತಿಗತಿ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಬ್ಯಾಂಕಿನ ಹಿಂದಿನ ಅಧ್ಯಕ್ಷ ಅನಂತಕೃಷ್ಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ತನ್ನಿಮಿತ್ತ, ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಪಿ. ಜಯರಾಂ ಭಟ್ ಅವರು ಈ ಪ್ರಗತಿಗೆ ಕಾರಣರಾದ ಎಲ್ಲಾ ಗ್ರಾಹಕರಿಗೆ, ಷೇರುದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರೋತ್ಸಾಹ ನೀಡಿ ಸಹಕರಿಸಿದ ಹಿತೈಷಿಗಳನ್ನು ವಂದಿಸಿ, ಸೂಕ್ತ ಮಾರ್ಗದರ್ಶನ ನೀಡುತ್ತಿರುವ ಆಡಳಿತ ಮಂಡಳಿಯನ್ನು ಅಭಿನಂದಿಸಿದ್ದಾರೆ. ಈ ಹಣಕಾಸು ವರ್ಷಾಂತ್ಯಕ್ಕೆ ವ್ಯವಹಾರದ ಗುರಿಯು 54 ಸಾವಿರ ಕೋಟಿ ರೂ.ಗೂ ಮಿಗಿಲಾಗಿದ್ದು, ಇದನ್ನು ಸಾಧಿಸಲು ತನ್ನ ಎಲ್ಲಾ ಸಿಬಂದಿ ಶ್ರಮಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.












Click it and Unblock the Notifications