ಹಸುಗೂಸಿಗೆ ಹೃದ್ರೋಗ, ಚಾಚಿಬಂದ ಸಹಾಯಹಸ್ತ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಗರ ಗ್ರಾಮದ ಮುದ್ದಪ್ಪ ಹಾಗೂ ನಿರ್ಮಲಾ ದಂಪತಿಗಳ ಏಕೈಕ ಮಗ ಶ್ರೀನಿವಾಸ (5 ತಿಂಗಳು) ಹೃದಯ ಸಂಬಂದಿ ಕಾಯಿಲೆಯಿಂದ ಬಳಲುತ್ತಿದ್ದಾನೆ. ಜೀವನ ನಿರ್ವಹಣೆಗೆ ಕೂಲಿನಾಲಿ ಮಾಡಿಕೊಂಡಿರುವ ಈ ದಂಪತಿಗಳಿಗೆ ತಮ್ಮ ಮಗ ಜೀವ ಹಿಂಡುವ ರೋಗಕ್ಕೆ ತುತ್ತಾಗಿರುವುದು ಆಕಾಶ ಕಳಚಿ ಬಿದ್ದಂತಾಗಿದೆ.
ಹೊಟ್ಟೆಪಾಡಿಗಾಗಿ ಮುಂಬೈ, ಬೆಂಗಳೂರು, ಪೂನಾ, ಅಂತ ಊರೂರು ತಿರುಗುವ ಈ ದಂಪತಿಗಳಿಗೆ ವಾಸಕ್ಕೆ ಒಂದು ಯೋಗ್ಯ ಮನೆ ಹಾಗೂ ಉದ್ಯೋಗವಿಲ್ಲದೆ ಅಲೆಮಾರಿ ಜೀವನ ನಡೆಸುತ್ತಿದ್ದು, ಈಗ ಮಗುವಿನ ಕಾಯಿಲೆ ಅವರನ್ನು ಇನ್ನಷ್ಟು ಕುಸಿಯುವಂತೆ ಮಾಡಿದೆ. ಅಲೆಮಾರಿಗಳಾದ್ದರಿಂದ ರೇಶನ್ ಕಾರ್ಡ ಸೇರಿದಂತೆ ಸರ್ಕಾರದ ಯಾವುದೇ ಸೌಲಭ್ಯ ಸಿಕ್ಕಿಲ್ಲ. ಹಾಗಾಗಿ ಉಚಿತ ವೈದ್ಯಕೀಯ ಸೌಕರ್ಯ ದೊರೆಯದೆ, ಹಣ ಹೊಂದಿಸಲು ಸಾಧ್ಯಾವಾಗದೆ ಕೈ ಸೋತು ಹೋಗಿವೆ ಅಂತಾರೆ ಮಗುವಿನ ತಂದೆ ಮುದ್ದಪ್ಪ.
ಏನಾದರೊಂದು ಗುರುತಿನ ಚೀಟಿ ಇದ್ದರೂ ಸೌಲಭ್ಯ ಸಿಗಲು ಕಷ್ಟ ಪಡುವ ಹೊತ್ತಿನಲ್ಲಿ ಯಾವುದೇ ಗುರುತು ಪತ್ರ ಹೊಂದಿಲ್ಲದ ಕಾರಣ ಸರ್ಕಾರದ ಬಹು ಮುಖ್ಯಯೋಜನೆ ವಾಜಪೇಯಿ ಆರೋಗ್ಯಶ್ರೀ ಯೋಜನೆಯಲ್ಲಿ ಏರ್ಪಡಿಸಲಾಗಿದ್ದ ಆರೋಗ್ಯ ಶಿಬಿರದಲ್ಲಿ ಮಗುವಿಗೆ ಚಿಕಿತ್ಸೆ ನೀಡಲು ನಿರಾಕರಿಸಲಾಗಿದೆ. ಹೊಟ್ಟೆಗೆ ಬೇಕಾಗುವ ಹಿಟ್ಟಿಗಾಗಿ ಪ್ರತಿಕ್ಷಣದ ಅತಂಕ ಎದುರಿಸುವ ಹಂತದಲ್ಲಿರುವ ಈ ದಂಪತಿಗಳಿಗೆ ಸುಮಾರು 1 ಲಕ್ಷ ಖರ್ಚು ಮಾಡಿ ತಮ್ಮ ಮಗನಿಗೆ ಚಿಕಿತ್ಸೆ ಕೊಡಿಸುವುದು ಕನಸಿನ ಮಾತಾಗಿದ್ದು ಯಾರಾದರೂ ದಾನಿಗಳು ಅಥವಾ ಸಂಘಸಂಸ್ಥೆಗಳು ಮುಂದೆ ಬಂದು ಚಿಕಿತ್ಸೆ ವೆಚ್ಚ ಭರಿಸಬೇಕಾಗಿದೆ.
ವೈದ್ಯರೇ ನಿಗದಿ ಪಡಿಸಿದಂತೆ ಇನ್ನೂ ಹದಿನೈದು ದಿನಗಳಲ್ಲಿ ಮಗುವಿಗೆ ಚಿಕಿತ್ಸೆ ನೀಡದಿದ್ದರೆ ಪ್ರಾಣಕ್ಕೆ ಅಪಾಯ. ಇದನ್ನು ಕೇಳುತ್ತಿದ್ದಂತೆ ದಂಪತಿಗಳಿಗೆ ಆಕಾಶವೇ ಕಳಚಿಬಿದ್ದಂತಾಗಿದೆ. ಸಮಾಜ ಸೇವೆಯ ಹೆಸರಿನಲ್ಲಿ ಹುಟ್ಟುಹಬ್ಬದ ಕಟೌಟ್ಗಳನ್ನು ನಿರ್ಮಿಸಿ ಲಕ್ಷಾಂತರ ಖರ್ಚು ಮಾಡಿ ಪುಕ್ಕಟೆ ಪೋಜು ಕೊಡುವ ಪುಡಿರಾಜಕಾರಣಿಗಳು ಇಂತಹ ಕಾಯಿಲೆಯ ಮಗುವಿನ ಆರೋಗ್ಯಕ್ಕೆ ತಗುಲುವ ವೆಚ್ಚ ಭರಿಸುವ ಮನಸ್ಸು ಮಾಡಲಿ ಸಂಘಸಂಸ್ಥೆಗಳು ಉದಾರ ದಾನಿ ಮಾಡಿ ಮಾನವೀಯತೆ ಮೆರೆಯಲಿ.
ಅಮಾನವೀಯವಾಗಿ ದೌರ್ಜನ್ಯಕ್ಕೊಳಗಾಗ ದೆಹಲಿಯ ಬೇಬಿ ಫಾಲಕ್ ಕತೆ ನಿಮಗೆಲ್ಲರಿಗೂ ಗೊತ್ತೇ ಇದೆ. ಸರ್ವ ರೀತಿಯ ಚಿಕಿತ್ಸೆ ದೊರಕಿಯೂ ಬೇಬಿ ಫಾಲಕ್ ಇನ್ನೂ ಜೀವನ್ಮರಣದ ನಡುವೆ ತುಯ್ದಾಡುತ್ತಿದೆ. ಕನಿಷ್ಠ ಈ ಮಗುವಿಗೆ ಸಕಾಲದಲ್ಲಿ ಚಿಕಿತ್ಸೆ ದೊರಕಿದರೆ ಮಗು ಬದುಕುಳಿಯುತ್ತದೆ. ಆರೋಗ್ಯ ಕ್ಷೇತ್ರದಲ್ಲಿ ಜಗತ್ತಿನ ಅತ್ಯುತ್ತಮ ಕ್ರಿಯಾತ್ಮಕ 10 ಕಂಪನಿಗಳಲ್ಲಿ 2ನೇ ಸ್ಥಾನ ಪಡೆದಿರುವ ಮತ್ತು ಭಾರತದಲ್ಲಿ 1ನೇ ಸ್ಥಾನದಲ್ಲಿರುವ ಬೆಂಗಳೂರಿನ ನಾರಾಯಣ ಹೃದಯಾಲಯ ತಾನೇ ಮುಂದೆಬಂದು ಈ ಮಗುವಿನ ರಕ್ಷಣೆಗೆ ಮುಂದಾಗಬಾರದೇಕೆ?
ಇದೀಗ ಬಂದ ಸುದ್ದಿ : ಸುರಪುರದ ಶಾಸಕ ಮತ್ತು ಯಾದಗಿರಿ ಉಸ್ತುವಾರಿ ಸಚಿವ ರಾಜುಗೌಡ ಅವರು ಮಗುವಿನ ಶಸ್ತ್ರಚಿಕಿತ್ಸೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಹಾಗೆಯೆ, ಕೆಲ ಸಂಘಟನೆಗಳೂ ಮುಂದೆಬಂದಿವೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications