Get Updates
Get notified of breaking news, exclusive insights, and must-see stories!

ಯಾದಗಿರಿ : ಕೃಷಿ ಇಲಾಖೆಯಿಂದ ರಾಷ್ಟ್ರಧ್ವಜಕ್ಕೆ ಅವಮಾನ

National flag insulted in Yadgir
ಯಾದಗಿರಿ, ಫೆ. 17 : ಫೆ. 14ರಂದು ಉನ್ನತ ಶಿಕ್ಷಣ ಸಚಿವ ವಿ.ಎಸ್.ಆಚಾರ್ಯ ನಿಧನರಾದ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿತ್ತು. ಗೌರವ ಸೂಚಕವಾಗಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಿ ಶೋಕಾಚರಣೆ ಮಾಡಲಾಗಿತ್ತು. ಆದರೆ ಶೋಕಾಚರಣೆ ಫೆ.16ರಂದೇ ಮುಕ್ತಾಯವಾದರೂ ಯಾದಗಿರಿಯಲ್ಲಿ ಶುಕ್ರವಾರ ಕೂಡ ಅರ್ಧ ಇಳಿಸಿದ ರಾಷ್ಟ್ರಧ್ವಜ ಹಾರಾಡುತ್ತಿತ್ತು.

ಯಾದಗಿರಿಯ ಸಹಾಯಕ ಕೃಷಿ ಅಧಿಕಾರಿ ಕಾರ್ಯಲಯದ ಮುಂದೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಅರ್ಧಕ್ಕೆ ರಾಷ್ಟ್ರಧ್ವಜ ಹಾರಾಡುತ್ತಿತ್ತು. ಮೂರು ದಿನಗಳ ಶೋಕಾಚರಣೆ ನಿನ್ನೆನೆ ಮುಕ್ತಾಯವಾಗಿತ್ತು. ಸಾರ್ವಜನಿಕರು ಈ ಸಂಗತಿಯನ್ನು ಸಹಾಯಕ ಕೃಷಿ ಅಧಿಕಾರಿ ರಾಜಣ್ಣ ಗಮನಕ್ಕೆ ತಂಗಾದ ಕಕ್ಕಾಬಿಕ್ಕಿಯಾದ ರಾಜಣ್ಣ ಸಿಬ್ಬಂದಿಗಳ ನೆರವಿನಿಂದ ರಾಷ್ಟ್ರಧ್ವಜವನ್ನು ಕಾಲಲ್ಲಿ ಚಪ್ಪಲಿ ಹಾಕಿಕೊಂಡೇ ಕೆಳಗೆ ಇಳಿಸಿದ್ದಾರೆ.

ರಾಷ್ಟ್ರಧ್ವಜವನ್ನು ಕೆಳಗೆ ಇಳಿಸುವಾಗ ಅದರದೆ ಆದ ಗೌರವ ಮತ್ತು ನೀತಿ ನಿಯಮಗಳು ಇರುತ್ತವೆ. ಆದರೆ, ಬೇಜವಬ್ದಾರಿ ಅಧಿಕಾರಿಗಳು ನಿಯಮಗಳನ್ನು ಪಾಲಿಸದೆ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಇದು ಇಡೀ ನಾಗರಿಕ ಸಮುದಾಯ ತಲೆ ತಗಿಸುವಂತೆ ಮಾಡಿದೆ. ಇನ್ನು ಮುಂದಾದರೂ ಇಂತಹ ಅಚಾತುರ್ಯ ನಡೆಯದಂತೆ ನೋಡಿಕೊಳ್ಳಲಿ ಎಂದು ನಾಗರಿಕರು ಹಿಡಿಶಾಪ ಹಾಕಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+