ಕ್ರಿಸ್ಮಸ್ ದೇಣಿಗೆ ನೀಡದಿದ್ದಕ್ಕೆ ಬಾಲಕನ ಕಣ್ಣೇ ಕಿತ್ತ ಶಿಕ್ಷಕಿ

ತಾಲೂಕಿನ ವೆಂಕಟಾಚಲಪತಿ ಮತ್ತು ಪೂರ್ಣಿಮಾ ದಂಪತಿಗೆ ಇರುವ ಏಕೈಕ ಪುತ್ರ ರವಿತೇಜಾ. ಸೇಂಟ್ ಆನ್ಸ್ ಶಾಲೆಯಲ್ಲಿ ಆಡಳಿತ ಮಂಡಳಿ ವಿದ್ಯಾರ್ಥಿಗಳಿಂದ ದೇಣಿಗೆ ಪಡೆದು ಕ್ರಿಸ್ಮಸ್ ಹಬ್ಬ ಆಚರಿಸಲು ನಿರ್ಧರಿಸಿದ್ದರು. ಆದರೆ ಎಲೆಕ್ಟ್ರಿಕಲ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿರುವ ಈತನ ತಂದೆ ದೇಣಿಗೆ ನೀಡಲು ನಿರಾಕರಿಸಿದರು. ಇಷ್ಟಕ್ಕೆ ಶಿಕ್ಷಕಿ ಅಸ್ತಯಾ ಡಿಸೆಂಬರ್ 16 ರಂದು ವಿದ್ಯಾರ್ಥಿಯನ್ನು ಮುಖ್ಯ ಶಿಕ್ಷಕಿ ಮೇರಿ ವಿನಿತಾ ಬಳಿ ಕರೆದುಕೊಂಡು ಹೋದರು.
ನಾಲ್ಕು ತಾಸುಗಳ ಕಾಲ ವಿದ್ಯಾರ್ಥಿಯನ್ನು ಮುಖ್ಯ ಶಿಕ್ಷಕಿ ಕೊಠಡಿಯಲ್ಲಿ ನಿಲ್ಲಿಸಿದ್ದಾರೆ. ಶಿಕ್ಷೆ ತಾಳಲಾರದೆ ರವಿತೇಜಾ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಮೇರಿ ವಿನಿತಾ ಈತನ ಕಣ್ಣಿನ ಮೇಲೆ ಪೆನ್ಸಿಲ್ ನಿಂದ ಬಲವಾಗಿ ಚುಚ್ಚಿದ್ದಾಳೆ. ಚುಚ್ಚಿದ ರಭಸಕ್ಕೆ ರವಿತೇಜನ ಕಣ್ಣುಗುಡ್ಡೆ ಸೀಳಿ ಹೋಗಿದೆ. ಪೋಷಕರಿಗೆ ವಿಷಯ ತಿಳಿಸದೇ ಶಾಲೆಯ ಸಿಬಂದಿ ವಿದ್ಯಾರ್ಥಿಯನ್ನು ಮಿಂಟೋ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮಗು ಇನ್ನೂ ಮನೆಗೆ ಬಾರದಿರುವುದರಿಂದ ಗಾಭರಿಗೊಂಡ ಪೋಷಕರಿಗೆ ಆನಂತರ ಶಾಲೆಯವರು ವಿಷಯ ತಿಳಿಸಿದ್ದಾರೆ. ಮಗನನ್ನು ನೋಡಲು ಹೆತ್ತ ಕರುಳು ಓಡೋಡಿ ಬೆಂಗಳೂರು ಮಿಂಟೋ ಆಸ್ಪತ್ರೆಗೆ ಬಂದಾಗ ಶಾಲೆಯವರು ಅವರನ್ನು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ವೆಚ್ಚವನ್ನು ಭರಿಸುವ ಭರವಸೆ ಕೂಡಾ ನೀಡಿದ್ದಾರೆ.
ಎಲೆಕ್ಟ್ರಿಕ್ ಕೆಲಸ ಮಾಡುವ ರವಿತೇಜಾ ತಂದೆ ಇದ್ದಬದ್ದ ಹಣವನ್ನು ಖರ್ಚು ಮಾಡಿ ಮಗನಿಗೆ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಮಿಂಟೋ ಆಸ್ಪತ್ರೆಯ ವೈದ್ಯರು ರವಿತೇಜಾನಿಗೆ ಮತ್ತೆ ಕಣ್ಣು ದೃಷ್ಟಿ ಬರುವ ಖಚಿತ ಭರವಸೆ ನೀಡುತ್ತಿಲ್ಲ. ಇದೇ ಬರುವ ಮಂಗಳವಾರ (ಫೆ 28) ಮತ್ತೊಮ್ಮೆ ಶಸ್ತ್ರಚಿಕಿತ್ಸೆ ನಡೆಸಲಿದ್ದಾರೆ ಎಂದು ರವಿತೇಜಾ ಪೋಷಕರು ಉದಯವಾಣಿ ದಿನಪತ್ರಿಕೆಯಲ್ಲಿ ತಮ್ಮ ನೋವನ್ನು ತೋಡಿಕೊಂಡಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications