ಕ್ರಿಸ್ಮಸ್ ದೇಣಿಗೆ ನೀಡದಿದ್ದಕ್ಕೆ ಬಾಲಕನ ಕಣ್ಣೇ ಕಿತ್ತ ಶಿಕ್ಷಕಿ

ತಾಲೂಕಿನ ವೆಂಕಟಾಚಲಪತಿ ಮತ್ತು ಪೂರ್ಣಿಮಾ ದಂಪತಿಗೆ ಇರುವ ಏಕೈಕ ಪುತ್ರ ರವಿತೇಜಾ. ಸೇಂಟ್ ಆನ್ಸ್ ಶಾಲೆಯಲ್ಲಿ ಆಡಳಿತ ಮಂಡಳಿ ವಿದ್ಯಾರ್ಥಿಗಳಿಂದ ದೇಣಿಗೆ ಪಡೆದು ಕ್ರಿಸ್ಮಸ್ ಹಬ್ಬ ಆಚರಿಸಲು ನಿರ್ಧರಿಸಿದ್ದರು. ಆದರೆ ಎಲೆಕ್ಟ್ರಿಕಲ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿರುವ ಈತನ ತಂದೆ ದೇಣಿಗೆ ನೀಡಲು ನಿರಾಕರಿಸಿದರು. ಇಷ್ಟಕ್ಕೆ ಶಿಕ್ಷಕಿ ಅಸ್ತಯಾ ಡಿಸೆಂಬರ್ 16 ರಂದು ವಿದ್ಯಾರ್ಥಿಯನ್ನು ಮುಖ್ಯ ಶಿಕ್ಷಕಿ ಮೇರಿ ವಿನಿತಾ ಬಳಿ ಕರೆದುಕೊಂಡು ಹೋದರು.
ನಾಲ್ಕು ತಾಸುಗಳ ಕಾಲ ವಿದ್ಯಾರ್ಥಿಯನ್ನು ಮುಖ್ಯ ಶಿಕ್ಷಕಿ ಕೊಠಡಿಯಲ್ಲಿ ನಿಲ್ಲಿಸಿದ್ದಾರೆ. ಶಿಕ್ಷೆ ತಾಳಲಾರದೆ ರವಿತೇಜಾ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಮೇರಿ ವಿನಿತಾ ಈತನ ಕಣ್ಣಿನ ಮೇಲೆ ಪೆನ್ಸಿಲ್ ನಿಂದ ಬಲವಾಗಿ ಚುಚ್ಚಿದ್ದಾಳೆ. ಚುಚ್ಚಿದ ರಭಸಕ್ಕೆ ರವಿತೇಜನ ಕಣ್ಣುಗುಡ್ಡೆ ಸೀಳಿ ಹೋಗಿದೆ. ಪೋಷಕರಿಗೆ ವಿಷಯ ತಿಳಿಸದೇ ಶಾಲೆಯ ಸಿಬಂದಿ ವಿದ್ಯಾರ್ಥಿಯನ್ನು ಮಿಂಟೋ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮಗು ಇನ್ನೂ ಮನೆಗೆ ಬಾರದಿರುವುದರಿಂದ ಗಾಭರಿಗೊಂಡ ಪೋಷಕರಿಗೆ ಆನಂತರ ಶಾಲೆಯವರು ವಿಷಯ ತಿಳಿಸಿದ್ದಾರೆ. ಮಗನನ್ನು ನೋಡಲು ಹೆತ್ತ ಕರುಳು ಓಡೋಡಿ ಬೆಂಗಳೂರು ಮಿಂಟೋ ಆಸ್ಪತ್ರೆಗೆ ಬಂದಾಗ ಶಾಲೆಯವರು ಅವರನ್ನು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ವೆಚ್ಚವನ್ನು ಭರಿಸುವ ಭರವಸೆ ಕೂಡಾ ನೀಡಿದ್ದಾರೆ.
ಎಲೆಕ್ಟ್ರಿಕ್ ಕೆಲಸ ಮಾಡುವ ರವಿತೇಜಾ ತಂದೆ ಇದ್ದಬದ್ದ ಹಣವನ್ನು ಖರ್ಚು ಮಾಡಿ ಮಗನಿಗೆ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಮಿಂಟೋ ಆಸ್ಪತ್ರೆಯ ವೈದ್ಯರು ರವಿತೇಜಾನಿಗೆ ಮತ್ತೆ ಕಣ್ಣು ದೃಷ್ಟಿ ಬರುವ ಖಚಿತ ಭರವಸೆ ನೀಡುತ್ತಿಲ್ಲ. ಇದೇ ಬರುವ ಮಂಗಳವಾರ (ಫೆ 28) ಮತ್ತೊಮ್ಮೆ ಶಸ್ತ್ರಚಿಕಿತ್ಸೆ ನಡೆಸಲಿದ್ದಾರೆ ಎಂದು ರವಿತೇಜಾ ಪೋಷಕರು ಉದಯವಾಣಿ ದಿನಪತ್ರಿಕೆಯಲ್ಲಿ ತಮ್ಮ ನೋವನ್ನು ತೋಡಿಕೊಂಡಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications