ಫೆ.19ರಂದು ತಪ್ಪದೆ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ

ಐದು ವರ್ಷದೊಳಗಿನ 74,59,152 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಉದ್ದೇಶ ಇಲಾಖೆ ಇಟ್ಟುಕೊಂಡಿದೆ. ಸಾವಿರಾರು ಕಾರ್ಯಕರ್ತರು ರಾಜ್ಯದಾದ್ಯಂತ ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ. ತಲುಪಲು ಸಾಧ್ಯವಿಲ್ಲದ ಪ್ರದೇಶಗಳು ಹಾಗೂ ಬಸ್ಸು ಮತ್ತು ರೈಲು ನಿಲ್ದಾಣಗಳಲ್ಲಿ ವಿಶೇಷ ಸಂಚಾರಿ ತಂಡಗಳು ಕಾರ್ಯನಿರ್ವಹಿಸಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ ರಮಣರೆಡ್ಡಿಯವರು ತಿಳಿಸಿದ್ದಾರೆ.
ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವ ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸಲು ವ್ಯವಸ್ಥಿತ ಪ್ರಚಾರ ಮಾಡಲಾಗುತ್ತಿದೆ. ಆಕಾಶವಾಣಿ, ದೂರದರ್ಶನ ಮತ್ತು ಇತರೆ ಖಾಸಗಿ ರೇಡಿಯೋ ಹಾಗೂ ಟಿವಿ ವಾಹಿನಿಗಳಲ್ಲಿ ಗಣ್ಯರ ಸಂದೇಶಗಳು, ನೇರ ಫೋನ್ ಇನ್ ಸಂದರ್ಶನ, ನಿರಂತರ ಪ್ರಕಟಣೆಗಳ ಮೂಲಕ ಪ್ರಚಾರ ಕಾರ್ಯ ಮಾಡಲಾಗುತ್ತದೆ. ಇದಲ್ಲದೆ ಶಿಕ್ಷಣ ಸಂಸ್ಥೆಗಳು, ವೈದ್ಯಕೀಯ ಕಾಲೇಜುಗಳು, ನರ್ಸಿಂಗ್ ಕಾಲೇಜುಗಳು, ಸ್ಥಳೀಯ ಸಂಸ್ಥೆಗಳು ರೋಟರಿ ಇಂಟರ್ನ್ಯಾಷನಲ್ ಸೇರಿದಂತೆ ಇತರ ಸ್ವಯಂ ಸೇವಾ ಸಂಸ್ಥೆಗಳು ಪಲ್ಸ್ ಪೊಲೀಯೋ ಲಸಿಕೆ ಕಾರ್ಯಕ್ರಮದ ಯಶಸ್ಸಿಗೆ ಕೈ ಜೋಡಿಸಿವೆ.
ಮೊದಲನೇ ಹಂತದ ಪೋಲಿಯೋ ಲಸಿಕೆ ಆಂದೋಲನಕ್ಕೆ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಬೆಳಿಗ್ಗೆ 8 ಗಂಟೆಗೆ ಆಯ್ದ ಕೆಲವು ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿರುತ್ತಾರೆ.
ರಾಜ್ಯದಲ್ಲಿ 2007ರ ನವೆಂಬರ್ 3ರಂದು ರಾಯಚೂರಿನಲ್ಲಿ ವರದಿಯಾದ ಪೋಲಿಯೋ ಪ್ರಕರಣವೇ ಕೊನೆಯದು. ಅದೂ ಸಹ ವಲಸೆ ಕುಟುಂಬವೊಂದರಲ್ಲಿ ಕಂಡುಬಂದಿದ್ದು, ರಾಜ್ಯದವರಲ್ಲಿಯೇ ಕಂಡುಬಂದ ಪೋಲಿಯೋ ಪ್ರಕರಣ ವರದಿಯಾಗಿದ್ದು ಬೆಂಗಳೂರಿನ ಯಶವಂತಪುರದಲ್ಲಿ 2004ರಲ್ಲಿ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications