ಹೆಣ್ಣು ಹೆತ್ತ ತಪ್ಪಿಗೆ ಮೂರು ಅಮಾಯಕ ಜೀವ ಬಲಿ

ಗಂಡನಿಂದ ಗಂಡು ಸಂತಾನ ಕರುಣಿಸದಿದ್ದಕ್ಕಾಗಿ ಕುಹಕದ ನುಡಿಗಳನ್ನು ಆಗಾಗ ಕೇಳುತ್ತಿದ್ದ 30 ವರ್ಷದ ಮಹಿಳೆ ಗಾಯತ್ರಿ ಬಾಲಾಜಿ ಮತ್ತು ಮೂರು ವರ್ಷದ ಮಗಳು ಮಹಿಕಾ ನೇಣಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಇನ್ನೂ ಹೃದಯವಿದ್ರಾವಕ ಸಂಗತಿಯೆಂದರೆ, 9 ತಿಂಗಳ ಮಗಳು ವಿಭಾಳ ದೇಹ ಬಕೆಟ್ಟಿನಲ್ಲಿ ದೊರೆತಿದೆ.
ಒಂದೇ ಸೀರೆಯನ್ನು ದೊಡ್ಡ ಮಗಳನ್ನು ನೇಣಿಗೆ ಹಾಕಲು ಮತ್ತು ತಾವು ನೇಣಿಗೆ ಶರಣಾಗಲು ಗಾಯತ್ರಿ ಬಳಸಿದ್ದಾರೆ. ಸಾಯುವ ಮುನ್ನ ಮರಣ ಪತ್ರ ಬರೆದಿಟ್ಟಿರುವ ಗಾಯತ್ರಿ, ತಮ್ಮ ಸಾವಿಗೆ ಯಾರೂ ಕಾರಣರಲ್ಲ, ಇಂಥ ಕೃತ್ಯ ಎಸಗುತ್ತಿರುವುದಕ್ಕಾಗಿ ದಯವಿಟ್ಟು ಕ್ಷಮಿಸಿ ಎಂದು ಹೇಳಿದ್ದಾರೆ.
ಈ ಸಾವಿಗೆ ಯಾರೂ ಕಾರಣರಲ್ಲ ಎಂಬ ಸಂಗತಿಯನ್ನು ಒಪ್ಪಲು ನೆರೆಹೊರೆಯವರು ಒಪ್ಪುತ್ತಿಲ್ಲ. ಹೆಂಡತಿಯ ಜೊತೆ ಗಂಡ ಬಾಲಾಜಿ ಪ್ರತಿನಿತ್ಯ ಅಮಾನವೀಯವಾಗಿ ವರ್ತಿಸುತ್ತಿದ್ದ. ಹೆಣ್ಣು ಹೆತ್ತಿದ್ದಕ್ಕಾಗಿ ದಿನಾಲು ಬಡಿಯುತ್ತಿದ್ದ ಮತ್ತು ಮೂದಲಿಸುತ್ತಿದ್ದ. ಆಗಾಗ ಯಾಕಾದರೂ ಬದುಕಿದ್ದೀಯಾ ಎಂದು ಚುಚ್ಚಿ ಮಾತನಾಡುತ್ತಿದ್ದ ಎಂದು ಅಕ್ಕಪಕ್ಕದವರು ಪೊಲೀಸರಿಗೆ ತಿಳಿಸಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications