ದಕ್ಷಿಣದ ಕಾಗೆಯೊಂದು ಉತ್ತರದ ಕಾಶಿಗೆ ಹಾರಿ

'ಮಾಡಬಾರದ್ದನ್ನು ಮಾಡಿ ಕಾಶಿ ವಿಶ್ವನಾಥನ ದರ್ಶನಕ್ಕೆ ತೆರಳಿದರೆ ಪಾಪ ಪರಿಹಾರವಾಗುವುದಿಲ್ಲ. ಯಡಿಯೂರಪ್ಪನವರ ರೀತಿಯ ರಾಜಕಾರಣಿಗಳ ಬಗ್ಗೆ ಕುವೆಂಪು ಆಗಲೇ ಯೋಚನೆ ಮಾಡಿದ್ದರು' ಎಂದು ಕುಮಾರಸ್ವಾಮಿ ಕಾಗೆ ಹಾರಿಸಿದ್ದಾರೆ.
ಇದೇ ವೇಳೆ 'ನನ್ನ ಅಧಿಕಾರದ ಅವಧಿಯಲ್ಲಿ ರಾಜ್ಯದಲ್ಲಿ ರೈತರು ಅತ್ಯಂತ ಸಂತೋಷವಾಗಿದ್ದರು. ಅಪ್ಪ-ಮಕ್ಕಳು ನನ್ನ ಜೊತೆ ಬಂದರೆ ಈಗಲೂ ತೋರಿಸುವೆ' ಎಂದು ಯಡಿಯೂರಪ್ಪ ಹಾಕಿರುವ ಸವಾಲನ್ನು ಸ್ವೀಕರಿಸಿದ ಕುಮಾರಸ್ವಾಮಿ ಅವರು 'ನಿಗದಿತ ದಿನ ಹಾಗೂ ಸ್ಥಳ ತಿಳಿಸಿದರೆ ಚರ್ಚೆಗೆ ಸಿದ್ಧ' ಎಂದಿದ್ದಾರೆ.
ಈ ಹಿಂದೆ ಹಲವು ಬಾರಿ ಸಾರ್ವಜನಿಕ ಚರ್ಚೆಗೆ ಕರೆದು ಯಡಿಯೂರಪ್ಪ ತಪ್ಪಿಸಿಕೊಂಡಿದ್ದಾರೆ. ಈ ಬಾರಿ ಅವರ ಆಹ್ವಾನ ಸ್ವೀಕರಿಸಿದರೆ ಶಿವಮೊಗ್ಗ ಜಿಲ್ಲೆಯಲ್ಲಿ ಅವರು ಅಕ್ರಮವಾಗಿ ಖರೀದಿಸಿರುವ 500 ಎಕರೆಗೂ ಹೆಚ್ಚು ಕೃಷಿ ಭೂಮಿಯನ್ನು ಅಥವಾ ಬೀಳಗಿ ಕ್ಷೇತ್ರದಲ್ಲಿ ಸಚಿವ ಮುರುಗೇಶ ನಿರಾಣಿ ಭೂ ಸ್ವಾಧೀನದ ಹೆಸರಲ್ಲಿ ರೈತರಿಗೆ ಮಾಡಿರುವ ಅನ್ಯಾಯವನ್ನು ತೋರಿಸಬಹುದು ಎಂದು ಕುಮಾರಸ್ವಾಮಿ ಹೇಳಿದರು.
ಯಡಿಯೂರಪ್ಪ ಪ್ರತಿಕ್ರಿಯೆ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಮ್ಮ ಕಾಶಿಯಾತ್ರೆಯನ್ನು ಕಾಗೆಗೆ ಹೋಲಿಸಿದ್ದರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇನ್ನೊಬ್ಬರ ಬಗ್ಗೆ ಹಗುರವಾಗಿ ಮಾತನಾಡುವುದು ಅಪ್ಪ-ಮಕ್ಕಳ ಹುಟ್ಟುಗುಣ. ಕಾಗೆ ಯಾರು, ಕೋಗಿಲೆ ಯಾರು ಎಂಬುದನ್ನು ರಾಜ್ಯದ ಜನ ಚುನಾವಣೆ ಸಂದರ್ಭದಲ್ಲಿ ನಿರ್ಧರಿಸುತ್ತಾರೆ.ಅಪ್ಪ-ಮಕ್ಕಳು ಯಾವಾಗಲೂ ಬೇರೆಯವರ ಕಾಲೆಳೆಯುವುದರಲ್ಲಿ ನಿರತರಾಗಿರುತ್ತಾರೆ. ಅಭಿವೃದ್ಧಿ ವಿಷಯ ಮಾತನಾಡದೇ ಕೇವಲ ಹೀಯಾಳಿಸುವುದೇ ಅವರ ಕೆಲಸ ಎಂದು ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications