Get Updates
Get notified of breaking news, exclusive insights, and must-see stories!

ದಕ್ಷಿಣದ ಕಾಗೆಯೊಂದು ಉತ್ತರದ ಕಾಶಿಗೆ ಹಾರಿ

hd-kumaraswamy-compares-yeddyurappa-to-crow
ಹುಬ್ಬಳ್ಳಿ, ಫೆ. 20: ಜೆಡಿಎಸ್ ಕಾರ್ಯಾಧ್ಯಕ್ಷ, ಸಂಸದ ಎಚ್.ಡಿ. ಕುಮಾರಸ್ವಾಮಿ ಅವರು ನಿನ್ನೆ ಭಾನುವಾರ ರಾಷ್ಟ್ರಕವಿ ಕುವೆಂಪು ಅವರನ್ನು ನೆನಪಿಸಿಕೊಂಡಿದ್ದಾರೆ. 'ಕುವೆಂಪು ಅವರು ಬಹು ಹಿಂದೆಯೇ ಹೇಳಿದಂತೆ ದಕ್ಷಿಣದ ಕಾಗೆಯೊಂದು ಉತ್ತರದ ಕಾಶಿಗೆ ಹೋಗಿ ಗಂಗೆಯಲ್ಲಿ ಮಿಂದರೂ ಅದು ಕೋಗಿಲೆಯಾಗಿ ಬದಲಾಗುವುದಿಲ್ಲ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಉದ್ದೇಶಿಸಿ ಲೇವಡಿ ಮಾಡಿದರು.

'ಮಾಡಬಾರದ್ದನ್ನು ಮಾಡಿ ಕಾಶಿ ವಿಶ್ವನಾಥನ ದರ್ಶನಕ್ಕೆ ತೆರಳಿದರೆ ಪಾಪ ಪರಿಹಾರವಾಗುವುದಿಲ್ಲ. ಯಡಿಯೂರಪ್ಪನವರ ರೀತಿಯ ರಾಜಕಾರಣಿಗಳ ಬಗ್ಗೆ ಕುವೆಂಪು ಆಗಲೇ ಯೋಚನೆ ಮಾಡಿದ್ದರು' ಎಂದು ಕುಮಾರಸ್ವಾಮಿ ಕಾಗೆ ಹಾರಿಸಿದ್ದಾರೆ.

ಇದೇ ವೇಳೆ 'ನನ್ನ ಅಧಿಕಾರದ ಅವಧಿಯಲ್ಲಿ ರಾಜ್ಯದಲ್ಲಿ ರೈತರು ಅತ್ಯಂತ ಸಂತೋಷವಾಗಿದ್ದರು. ಅಪ್ಪ-ಮಕ್ಕಳು ನನ್ನ ಜೊತೆ ಬಂದರೆ ಈಗಲೂ ತೋರಿಸುವೆ' ಎಂದು ಯಡಿಯೂರಪ್ಪ ಹಾಕಿರುವ ಸವಾಲನ್ನು ಸ್ವೀಕರಿಸಿದ ಕುಮಾರಸ್ವಾಮಿ ಅವರು 'ನಿಗದಿತ ದಿನ ಹಾಗೂ ಸ್ಥಳ ತಿಳಿಸಿದರೆ ಚರ್ಚೆಗೆ ಸಿದ್ಧ' ಎಂದಿದ್ದಾರೆ.

ಈ ಹಿಂದೆ ಹಲವು ಬಾರಿ ಸಾರ್ವಜನಿಕ ಚರ್ಚೆಗೆ ಕರೆದು ಯಡಿಯೂರಪ್ಪ ತಪ್ಪಿಸಿಕೊಂಡಿದ್ದಾರೆ. ಈ ಬಾರಿ ಅವರ ಆಹ್ವಾನ ಸ್ವೀಕರಿಸಿದರೆ ಶಿವಮೊಗ್ಗ ಜಿಲ್ಲೆಯಲ್ಲಿ ಅವರು ಅಕ್ರಮವಾಗಿ ಖರೀದಿಸಿರುವ 500 ಎಕರೆಗೂ ಹೆಚ್ಚು ಕೃಷಿ ಭೂಮಿಯನ್ನು ಅಥವಾ ಬೀಳಗಿ ಕ್ಷೇತ್ರದಲ್ಲಿ ಸಚಿವ ಮುರುಗೇಶ ನಿರಾಣಿ ಭೂ ಸ್ವಾಧೀನದ ಹೆಸರಲ್ಲಿ ರೈತರಿಗೆ ಮಾಡಿರುವ ಅನ್ಯಾಯವನ್ನು ತೋರಿಸಬಹುದು ಎಂದು ಕುಮಾರಸ್ವಾಮಿ ಹೇಳಿದರು.

ಯಡಿಯೂರಪ್ಪ ಪ್ರತಿಕ್ರಿಯೆ: ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ತಮ್ಮ ಕಾಶಿಯಾತ್ರೆಯನ್ನು ಕಾಗೆಗೆ ಹೋಲಿಸಿದ್ದರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇನ್ನೊಬ್ಬರ ಬಗ್ಗೆ ಹಗುರವಾಗಿ ಮಾತನಾಡುವುದು ಅಪ್ಪ-ಮಕ್ಕಳ ಹುಟ್ಟುಗುಣ. ಕಾಗೆ ಯಾರು, ಕೋಗಿಲೆ ಯಾರು ಎಂಬುದನ್ನು ರಾಜ್ಯದ ಜನ ಚುನಾವಣೆ ಸಂದರ್ಭದಲ್ಲಿ ನಿರ್ಧರಿಸುತ್ತಾರೆ.ಅಪ್ಪ-ಮಕ್ಕಳು ಯಾವಾಗಲೂ ಬೇರೆಯವರ ಕಾಲೆಳೆಯುವುದರಲ್ಲಿ ನಿರತರಾಗಿರುತ್ತಾರೆ. ಅಭಿವೃದ್ಧಿ ವಿಷಯ ಮಾತನಾಡದೇ ಕೇವಲ ಹೀಯಾಳಿಸುವುದೇ ಅವರ ಕೆಲಸ ಎಂದು ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+