ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆಬ್ರವರಿ ತಿಂಗಳ ಅಂತ್ಯಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಣೆ

By Mahesh
|
Google Oneindia Kannada News

HD Deve Gowda
ಚಿಕ್ಕಮಗಳೂರು, ಫೆ.20: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನು ಫೆ.27ರೊಳಗೆ ಘೋಷಿಸಲಾಗುವುದು ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದ್ದಾರೆ.

ಭಾನುವಾರ(ಫೆ.19)ದಂದು ಆಲ್ದೂರು ಹುಣಸೇಮಕ್ಕಿ ಸಮೀಪದ ಕೋಡೆವೂರು ದೇವಳದ ಉದ್ಘಾಟನೆಯಲ್ಲಿ ಭಾಗವಹಿಸಿದ್ದ ದೇವೇಗೌಡರು ಈ ಬಗ್ಗೆ ಹೇಳಿದರು.

ಎರಡೂ ಜಿಲ್ಲೆಗಳ ಮುಖಂಡರ ಮತ್ತು ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಜನವಾಹಿನಿ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಚಿಕ್ಕಮಗಳೂರಿನಲ್ಲಿ ಮತ್ತೆ ಜೆಡಿಎಸ್ ತನ್ನ ಪ್ರಾಬಲ್ಯ ಮೆರೆಯಲಿದೆ ಎಂದು ದೇವೇಗೌಡರು ಅಭಿಪ್ರಾಯಪಟ್ಟರು.

ಚುನಾವಣೆಯನ್ನು ಎದುರಿಸಲು ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತುಗಂಭೀರ ಚಿಂತನೆಗಳು ನಡೆಯುತ್ತಿದೆ. ಜನ ಬೆಂಬಲ ಕಳೆದುಕೊಂಡಿರುವ ಬಿಜೆಪಿ ನಿರ್ನಾಮ ಖಚಿತ ಎಂದರು.

ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರದದ ಜನ ವಿರೋಧಿ ಮತ್ತು ರೈತ ವಿರೋಧಿ ನೀತಿಯಿಂದ ಜನತೆ ಕಂಗೆಟ್ಟಿದ್ದಾರೆ. ಜೆಡಿಎಸ್ ಪಕ್ಷದತ್ತ ಒಲವು ಹರಿಸಿ ನಮ್ಮ ಅಭ್ಯರ್ಥಿಗೆ ಜಯ ತಂದುಕೊಡಲಿದ್ದಾರೆ ಎಂದು ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

English summary
JDS Candidate for the upcoming Udupi Chikmagalur Constituency Lok Sabha By Poll will be announced by Feb.27 said JDS Supremo HD Deve Gowda. He revealed this after inaugurating a temple near Aldur, Chikmagalur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X