ಪತ್ರಿಕೆ ಮೇಲೆ ಗೂಬೆ ಕೂರಿಸಿ ಸಾರಿ ಎಂದ ಡಿಬಿಸಿ

ಖುದ್ದಾಗಿ ಹೈಕೋರ್ಟ್ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾ ಭಕ್ತವತ್ಸಲ ಮತ್ತು ನ್ಯಾ ಎಚ್.ಎಸ್. ಕೆಂಪಣ್ಣ ಅವರಿದ್ದ ವಿಭಾಗೀಯ ಪೀಠದ ಎದುರು ಖುದ್ದು ಹಾಜರಾದ ಡಿ.ಬಿ. ಚಂದ್ರೇಗೌಡ ಬೇಷರತ್ ಆಗಿ ಕ್ಷಮೆ ಯಾಚಿಸಿದರು. ಅಲ್ಲದೆ ತಮ್ಮ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಕೈ ಬಿಡುವಂತೆ ಕೋರಿ ಪ್ರಮಾಣ ಪತ್ರ ಸಲ್ಲಿಸಿದರು.
ಪತ್ರಿಕೆಯ ಮೇಲೆ ಗೂಬೆ ಕೂರಿಸಿ...: 2011ರ ಅ. 18ರಂದು ಪತ್ರಿಕಾಗೋಷ್ಠಿಯಲ್ಲಿ ತಾವು ನೀಡಿದ್ದ ಹೇಳಿಕೆಯನ್ನು ರಾಜ್ಯಮಟ್ಟದ ಕನ್ನಡ ದಿನಪತ್ರಿಕೆಯೊಂದು ತಿರುಚಿ, ತಪ್ಪಾಗಿ ಅರ್ಥೈಸಿ ವರದಿ ಮಾಡಿದೆ. ಅಂದು ರಾಜ್ಯಪಾಲರ ಕೆಲ ನಡವಳಿಕೆ ಮಾತನಾಡಿದ್ದೇನೆ ಹೊರತು, ನ್ಯಾಯಾಂಗ ಅಥವಾ ನ್ಯಾಯಾಲಯದ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ ಎಂದು ಪ್ರಮಾಣ ಪತ್ರದಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ.
ಏನಿದು ಪ್ರಕರಣ: ಭೂಹಗರಣ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಜಾಮೀನು ನೀಡಲು ನ್ಯಾ ಸುಧೀಂದ್ರರಾವ್ ನಿರಾಕರಿಸಿದ್ದರು. ಆ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಚಂದ್ರೇಗೌಡರು ನ್ಯಾ ಸುಧೀಂದ್ರರಾವ್ ವಿರುದ್ಧ ಹೇಳಿಕೆ ನೀಡಿದ್ದರು. 'ಇದು ನ್ಯಾಯಾಂಗ ನಿಂದನೆ ಆಗುತ್ತದೆಯಲ್ಲವೇ?' ಎಂದು ಪತ್ರಕರ್ತರೊಬ್ಬರು ಎಚ್ಚರಿಸುವ ದನಿಯಲ್ಲಿ ಗೌಡರನ್ನು ಪ್ರಶ್ನಿಸಿದ್ದರು. ಅದಕ್ಕೆ ಸನ್ಮಾನ್ಯ ಚಂದ್ರೇಗೌಡರು 'ನಾನು ಕೂಡ ಕಾನೂನು ಇಲಾಖೆಯ ಮಾಜಿ ಸಚಿವ. ಏನು ಹೇಳಬೇಕು ಎಂಬುದು ನನಗೆ ಗೊತ್ತಿದೆ. ಏನೇ ಬಂದರೂ ಅದನ್ನು ಎದುರಿಸಲು ಸಿದ್ಧ' ಎಂದಿದ್ದರು.
ತಮ್ಮ ವಿರುದ್ಧ ಈ ರೀತಿ ಹೇಳಿಕೆ ನೀಡುವ ಮೂಲಕ ನ್ಯಾಯಾಂಗದ ಘನತೆಗೆ ಚಂದ್ರೇಗೌಡ ಅವರು ಚ್ಯುತಿ ಉಂಟುಮಾಡಿದ್ದಾರೆ. ತಮ್ಮ ವಿರುದ್ಧ ವೃಥಾ ಆರೋಪ ಮಾಡಿದ್ದಾರೆ, ಇದು ನ್ಯಾಯಾಂಗ ನಿಂದನೆ ಆಗುತ್ತದೆ ಎಂದು ನ್ಯಾ ಸುಧೀಂದ್ರರಾವ್ ಅವರು ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಪತ್ರ ಬರೆದಿದ್ದರು. ಈ ಪತ್ರದ ಆಧಾರದ ಮೇಲೆ ನ್ಯಾಯಾಂಗ ನಿಂದನೆ (ಕ್ರಿಮಿನಲ್) ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications