ಉಡುಪಿ ಉಪಸಮರ: ಜೆಡಿಎಸ್ ನಡೆ ಇನ್ನೂ ನಿಗೂಢ

ಇದೇ ವೇಳೆ, 'ಪಕ್ಷದ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಚುನಾವಣೆಯಲ್ಲಿ ಹೋರಾಡುತ್ತೇವೆ. ಇಲ್ಲದಿದ್ದರೆ ರಾಜ್ಯ ಪ್ರವಾಸ ಇತ್ಯಾದಿ ಕಾರ್ಯಕ್ರಮಗಳನ್ನು ಮುಂದುವರಿಸುತ್ತೇವೆ ಎಂದೂ ಅಚ್ಚರಿ ಮೂಡಿಸಿದ್ದಾರೆ.
ಹಾಸನದಲ್ಲಿ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿ ಸಂಸ್ಕರಣಾ ಘಟಕವನ್ನು ಮಂಗಳವಾರ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, ಆಯಾ ಜಿಲ್ಲಾ ಘಟಕದ ಮುಖಂಡರೊಂದಿಗೆ ಚರ್ಚಿಸಿ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟ ತೀರ್ಮಾನ ಕೈಗೊಳ್ಳಲಿದ್ದಾರೆ.
ಮೊದಲ ಹಂತದ 'ಜಯವಾಹಿನಿ' ರಾಜ್ಯ ಪ್ರವಾಸಕ್ಕೆ ನಾಡಿನ ಜನರಿಂದ ಉತ್ತಮ ಸಹಕಾರ, ಪ್ರೋತ್ಸಾಹ ಸಿಕ್ಕಿದೆ. ಇದೇ ರೀತಿ 2ನೆ ಹಂತದ ಪ್ರವಾಸ ಆರಂಭಿಸುವ ಬಗ್ಗೆ ಶೀಘ್ರವೇ ದಿನಾಂಕ ಪ್ರಕಟಿಸಲಾಗುವುದು. ಇದಲ್ಲದೆ 3ನೆ ಹಂತದ ಪ್ರವಾಸ ಸಹ ನಡೆಸಲಾಗುವುದು. ರಾಜ್ಯದ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡುವ ಮೂಲಕ ಬೇರೆ ಬೇರೆ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗುವುದು ಎಂದು ದೇವೇಗೌಡರು ಹೇಳಿದರು.












Click it and Unblock the Notifications