ಅನೈತಿಕ ಸಂಬಂಧ ಬಯಲಾಗಿ ವರ ಆತ್ಮಹತ್ಯೆ

ಮೈಸೂರಿನ ಇಲವಾಲದ ನಿವಾಸಿ ಶಿಕ್ಷಕಿಯೂ ಆಗಿರುವ ಗೀತಾ ಎಂಬಾಕೆಗೂ ಎಚ್.ಡಿ.ಕೋಟೆ ತಾಲೂಕು ಹಳ್ಳದಮನುಗನಹಳ್ಳಿಯ ನಿವಾಸಿ ಮಂಜುನಾಥ ಎಂಬಾತನಿಗೆ ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಪಾಲಿಕೆ ಸಮುದಾಯ ಭವನದಲ್ಲಿ ಫೆಬ್ರವರಿ 23 ಮತ್ತು 24ರಂದು ವಿವಾಹ ನಿಶ್ಚಯವಾಗಿತ್ತು. ಅದರಂತೆ ಮದುವೆ ಮಂಟಪಕ್ಕೆ ಎರಡು ಕಡೆಯವರು ಆಗಮಿಸಿದ್ದರು.
ಮದುವೆ ಸಂಪ್ರದಾಯದಂತೆ ನಿನ್ನೆ ರಾತ್ರಿ(ಫೆ.23) ವರೋಪಚಾರವೂ ನಡೆದಿತ್ತು. ಆದರೆ ವಿವಾಹ ಮಂಟಪದಲ್ಲಿದ್ದ ವರ ಮಂಜುನಾಥ ವಿವಾಹಕ್ಕೆ ಬಂದಿದ್ದ ಹೆಂಗಸಿನೊಂದಿಗೆ ಸಲುಗೆಯಿಂದ ವರ್ತಿಸುತ್ತಿದ್ದುದು ಕೆಲವರ ಅನುಮಾನಕ್ಕೆ ಕಾರಣವಾಗಿತ್ತು. ವಿಷಯ ತಿಳಿದ ಕೆಲವರು ಈ ಬಗ್ಗೆ ವಿಚಾರಿಸಿದಾಗ, ಆಕೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದು, ಗಂಡನೊಂದಿಗೆ ವಿಚ್ಛೇದನ ಪಡೆದಿರುವುದಾಗಿಯೂ, ಆಕೆಗೂ ಮಂಜುನಾಥನಿಗೂ ಅನೈತಿಕ ಸಂಬಂಧವಿರುವುದು ಬಯಲಾಯಿತು.
ವಿಷಯ ತಿಳಿದ ವಧು ಗೀತಾ ನಾನು ಮಂಜುನಾಥನನ್ನು ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾಳೆ. ಈ ಸಂದರ್ಭ ಗೊಂದಲ ಉಂಟಾಗಿ ವಧುವಿನ ಮನೆಯವರು ವಿವಾಹವನ್ನು ನಿಲ್ಲಿಸಿದ್ದಾರೆ. ಅಲ್ಲದೆ ವರನ ಹಾಗೂ ವಧುವಿನ ಕುಟುಂಬದ ನಡುವೆ ರಂಪಾಟವೂ ನಡೆದಿದೆ. ಆಗ ವಧುವಿನ ಕಡೆಯವರು ಮದುವೆಗಾಗಿ ಖರ್ಚು ಮಾಡಿದ ಹಣವನ್ನು ಕೂಡಲೇ ನೀಡುವಂತೆ ಆಗ್ರಹಿಸಿದ್ದಾರೆ. ಕೊನೆಗೂ ಅನ್ಯಮಾರ್ಗವಿಲ್ಲದೆ ವರನ ಕಡೆಯವರು ಮದುವೆ ಖರ್ಚು 5 ಲಕ್ಷ ರು. ಕೊಡುವುದಾಗಿ ಒಪ್ಪಿಕೊಂಡಿದ್ದಾರೆ. ಅದರಂತೆ ಹಣವನ್ನು ತರುವುದಾಗಿ ಹೇಳಿ ಮದುವೆ ಮಂಟಪದಿಂದ ಹೊರ ನಡೆದ ವರ ಮಂಜುನಾಥ ಭಯದಿಂದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇತ್ತ ಮದುವೆ ಅರ್ಧಕ್ಕೆ ನಿಂತು ಹೋದ ವಿಚಾರ ತಿಳಿದ ಗೀತಾಳ ದೂರದ ಸಂಬಂಧಿ ಶಿವರಾಜ್ ಎಂಬಾತ ಆಕೆಯನ್ನು ಮದುವೆಯಾಗಲು ಮುಂದೆ ಬಂದಿದ್ದರಿಂದ ಶುಕ್ರವಾರ ಮೈಸೂರಿನ ವಿಜಯನಗರದಲ್ಲಿರುವ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಬ್ಬರು ಸಪ್ತಪದಿ ತುಳಿದು ಬಾಳಸಂಗಾತಿಗಳಾದರು. ಆದರೆ ದಿಢೀರ್ ಬೆಳವಣಿಗೆ ವಧು ಗೀತಾಳಿಗೆ ಶಾಕ್ ನೀಡಿದ್ದು ಆಕೆ ಇನ್ನಷ್ಟೆ ಚೇತರಿಸಿಕೊಳ್ಳಬೇಕಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications