ಬೆಂಗಳೂರಿನ ಸ್ವಾಗತಕ್ಕೆ ತಳಿರು ತೋರಣ ಕಟ್ಟಿರಿ

ಧರಂ ಸಿಂಗ್ ಅವರು ಮುಖ್ಯಮಂತ್ರಿಯಾಗಿದ್ದಾಗ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಡಾ. ಯು.ಆರ್. ಅನಂತ ಮೂರ್ತಿ ಅವರು ಊರುಗಳ ಹೆಸರುಗಳನ್ನು ಕನ್ನಡೀಕರಣ ಮಾಡಬೇಕೆಂದು ಪ್ರಸ್ತಾವನೆ ಮುಂದಿಟ್ಟಿದ್ದರು. ಇದಕ್ಕೆ ಆಂಗ್ಲ ಪ್ರೇಮಿಗಳು ಮತ್ತು ಕನ್ನಡ ದ್ವೇಷಿಗಳು ಕೊಕ್ಕೆ ಹಾಕಿದ್ದರು ಮತ್ತು ಮುಖ್ಯವಾಗಿ ಸರ್ವೇ ಆಫ್ ಇಂಡಿಯಾದಿಂದ ಅನುಮತಿ ಪಡೆಯಬೇಕಾಗಿತ್ತು.
ಈಗ ಸತತ ಪ್ರಯತ್ನಗಳ ನಂತರ ಭಾರತ ಸರ್ವೇಕ್ಷಣ ಇಲಾಖೆಯಿಂದ ಅನುಮತಿ ಪತ್ರ ದೊರೆತಿದೆ. ಬ್ಯಾಂಗಲೋರ್ ಬೆಂಗಳೂರು ಆಗಬಾರದು ಮತ್ತು ಬೆಲ್ಗಮ್ ಬೆಳಗಾವಿ ಆಗಬಾರದೆಂದು ಹೂಡಲಾಗಿದ್ದ ರಿಟ್ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಕಸದ ಬುಟ್ಟಿಗೆ ಬಿಸಾಕಿದೆ. ಇನ್ನು ಮತ್ತೇನು ಅಡೆತಡೆಗಳು ಇಲ್ಲವೆಂಬುದನ್ನು ಖಾತರಿಪಡಿಸಿಕೊಂಡು ಹೊಸ ಹೆಸರುಗಳನ್ನು ರಾಜ್ಯ ಸರಕಾರ ಘೋಷಣೆ ಮಾಡಬೇಕಿದೆ.
ಇನ್ನೊಂದು ತಿಂಗಳಲ್ಲಿ ಕರ್ನಾಟಕದ ಜನರು ಕಾತುರದಿಂದ ಕಾಯುತ್ತಿರುವ ಘಳಿಗೆ ಬರಲಿದೆ. ಬಹುಶಃ ಹಿಂದೂಗಳ ಹೊಸ ವರ್ಷ ಯುಗಾದಿ ಹೊತ್ತಿಗೆ ಹೊಸ ಹೆಸರುಗಳು ಕರ್ನಾಟಕದ ಭೂಪಟದಲ್ಲಿ ರಾರಾಜಿಸಲಿವೆ. ಹನ್ನೆರಡು ಊರುಗಳಲ್ಲಿ ಹೊಸ ಮಾವಿನ ಚಿಗುರಿನಿಂದ ಕನ್ನಡಿಗರು ತಳಿರು ತೋರಣ ಕಟ್ಟಬೇಕಿದೆ. ಹಳೆ ಹೆಸರು ಮತ್ತು ಹೊಸ ಹೆಸರುಗಳು ಕೆಳಗಿನಂತಿರಲಿವೆ.
| ಹಳೆ ಹೆಸರು | ಹೊಸ ಹೆಸರು |
| Bangalore | Bengaluru |
| Mangalore | Mangaluru |
| Bellary | Ballary |
| Bijapur | Vijapur |
| Belgaum | Belagavi |
| Chikmagalur | Chikkamagaluru |
| Gulbarga | Kalburgi |
| Mysore | Mysuru |
| Hospet | Hosapete |
| Shimoga | Shivamogga |
| Hubli | Hubballi |
| Tumkur | Tumakuru |
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications