ಶಿವಾಜಿನಗರದ ರಸೆಲ್ ಮಾರ್ಕೆಟ್ ಬೆಂಕಿಗೆ ಆಹುತಿ

ಬೆಂಗಳೂರಿನ ಮಧ್ಯಭಾಗದಲ್ಲಿರುವ ಶಿವಾಜಿನಗರ ಅತ್ಯಂತ ಹಳೆದ ಪ್ರದೇಶಗಳಲ್ಲೊಂದು. ಅದರಲ್ಲೂ ಪಳಿಯುಳಿಕೆಯಂತಿರುವ 80 ವರ್ಷ ಹಳೆಯ ರಸೆಲ್ ಮಾರ್ಕೆಟ್ ಇಂಥದೊಂದು ಅಗ್ನಿ ಅನಾಹುತಕ್ಕೆ ಯಾವಾಗಲೂ ತೆರೆದುಕೊಂಡೇ ಇತ್ತು. ಬೆಂಕಿ ಬಿದ್ದ ಕೂಡಲೆ ಸ್ಥಳಕ್ಕೆ ಧಾವಿಸಿರುವ 25 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ.
ಶಿವಾಜಿನಗರದ ಶಾಸಕ ಎಂ. ರೋಶನ್ ಬೇಗ್, ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ್, ಮೋಟಮ್ಮ ಮುಂತಾದವರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸ್ಥಳಕ್ಕೆ ಭೇಟಿ ನೀಡಿರುವ ಬೆಂಗಳೂರು ಆಯುಕ್ತ ಎಂ.ಕೆ. ಶಂಕರಲಿಂಗೇ ಗೌಡ ಅವರು ನಷ್ಟು ಅನುಭವಿಸಿದ ವ್ಯಾಪಾರಿಗಳಿಗೆ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.
ಅತ್ಯಂತ ಹಳೆಯದಾಗಿರುವ ರಸೆಲ್ ಮಾರ್ಕೆಟ್ನ್ನು ಸಂಪೂರ್ಣ ನೆಲಸಮ ಮಾಡಿ ಹೊಸ ಸಂಕೀರ್ಣ ದೊರಕಿಸಿಕೊಡುವುದಾಗಿ ಭರವಸೆ ನೀಡಲಾಗಿದೆ. ಈ ಕಾರ್ಯವನ್ನು ಸರಕಾರ ಮೊದಲೇ ಮಾಡಬೇಕಾಗಿತ್ತು ಎಂಬುದು ವರ್ತಕರೊಬ್ಬರ ಅಭಿಪ್ರಾಯ. ಇಂದು ಸಂಭವಿಸಿದ ಅಗ್ನಿ ದುರಂತದಿಂದಾಗಿ, ಸರಕಾರ ಬೆಂಕಿ ಬಿದ್ದ ಮೇಲೆ ಬಾವಿ ತೋಡುತ್ತಿರುವಂತಾಗಿದೆ.
ಪರಿಹಾರ ಪ್ರಕಟ : ಈ ಅಗ್ನಿ ದುರಂತದಲ್ಲಿ ನಷ್ಟ ಹೊಂದಿರುವ ಪ್ರತಿ ವ್ಯಾಪಾರಿಗೆ ತಲಾ 50 ಸಾವಿರ ರು. ಪರಿಹಾರ ನೀಡುವುದಾಗಿ ಸರಕಾರ ಘೋಷಿಸಿದೆ. ಇಂದು ಸಂಜೆ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಸ್ಥಳಕ್ಕೆ ಭೇಟಿ ನೀಡಿ, ಮುಂದೆ ಇಂಥ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುವುದಾಗಿ ಭರವಸೆ ನೀಡಿದ್ದಾರೆ. ಇಂಥ ಭರವಸೆಯಿಂದ ನಷ್ಟ ಹೊಂದಿದವರಿಗೆ ಏನು ಪ್ರಯೋಜನ?
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications