ಸುದ್ದಿಗೋಷ್ಠಿಯಲ್ಲಿ ರಾಜಕೀಯ ನಿರ್ಧಾರ ಪ್ರಕಟ:ಯಡ್ಡಿ

ನಾಳೆ ಬೆಳಗ್ಗೆ ಸಂಜಯನಗರದ ರಾಧಾಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅದಕ್ಕೂ ಮುನ್ನ ಬೆಳಗ್ಗೆ 5.30ಕ್ಕೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದೆ. 11.30ಕ್ಕೆ ರೇಸ್ ಕೋರ್ಟ್ ರಸ್ತೆಯಲ್ಲಿರುವ ನಿವಾಸದಲ್ಲಿ ಸಾರ್ವಜನಿಕರಿಂದ ಶುಭಾಶಯ ವಿನಿಮಯ.
ಮಹತ್ವದ ಪತ್ರಿಕಾಗೋಷ್ಠಿಯಲ್ಲಿ ಎಲ್ಲ...: ಬಳಿಕ ಮೆಜಿಸ್ಟಿಕ್ ಬಳಿಯಿರುವ ಗುಬ್ಬಿ ತೋಂಟದಪ್ಪ ಛದ್ರದಲ್ಲಿ ಹಿಂದುಳಿದ ವರ್ಗದವರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4.30ಕ್ಕೆ ಆಪ್ತ ಸಚಿವರು. ಶಾಸಕರ ಜತೆ ಗುಪ್ತ ಸಮಾಲೋಚನೆ... ಮುಂದಿನ ರಾಜಕೀಯ ನಡೆ ಬಗ್ಗೆ ಅಂತಿಮ ಸುತ್ತಿನ ಮಾತುಕತೆ. ಅಲ್ಲಿಂದ ನೇರವಾಗಿ ಮಹತ್ವದ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಆಗ ತಮ್ಮ ರಾಜಕೀಯ ನಡೆ ಏನೆಂಬುದನ್ನು ಬಹಿರಂಗಪಡಿಸಲಿದ್ದಾರೆ ಎಂದು ಯಡಿಯೂರಪ್ಪ ಆಪ್ತ ಮೂಲಗಳು ತಿಳಿಸಿವೆ.












Click it and Unblock the Notifications