ಮಧು, ಪೂಜಾಗಾಂಧಿ ಇಬ್ಬರೂ ಜೆಡಿಎಸ್ ಅಭ್ಯರ್ಥಿಯಲ್ಲ

Udupi By poll candidates
ಉಡುಪಿ, ಫೆ 27: ಮಾಚ್ 18ರಂದು ನಡೆಯಲಿರುವ ಉಡುಪಿ - ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಜಾತ್ಯಾತೀತ ಜನತಾದಳ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ. ಚಿಕ್ಕಮಗಳೂರು ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಎಸ್ ಎಲ್ ಭೋಜೆಗೌಡ ಅವರನ್ನು ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ.

ಈ ಕ್ಷೇತ್ರದಲ್ಲಿ ಈಗ ತ್ರಿಕೋಣ ಸ್ಪರ್ಧೆ ಏರ್ಪಟ್ಟಿದ್ದು ಬಿಜೆಪಿಯಿಂದ ಸುನಿಲ್ ಕುಮಾರ್, ಕಾಂಗ್ರೆಸ್ ನಿಂದ ಜಯಪ್ರಕಾಶ್ ಹೆಗ್ಡೆ ಸ್ಪರ್ಧೆಯಲ್ಲಿದ್ದಾರೆ. ಈ ಕ್ಷೇತ್ರವನ್ನು ಪಕ್ಷ ಗಂಭೀರವಾಗಿ ಪರಿಗಣಿಸಲಿದ್ದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಉತ್ತಮ ಪೈಪೋಟಿ ನೀಡುವ ಭರವಸೆಯನ್ನು ಹೊಂದಿದ್ದೇವೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಕ್ಷೇತ್ರದ ಮತದಾರರಿಗೆ ರಾಜ್ಯದಲ್ಲಿನ ಬಿಜೆಪಿ ಮತ್ತು ಕೇಂದ್ರದಲ್ಲಿನ ಕಾಂಗ್ರೆಸ್ ಪಕ್ಷದ ದುರಾಡಳಿತದ ಬಗ್ಗೆ ವಿವರಿಸಲಿದ್ದೇವೆ. ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ನಮ್ಮ ಕಾರ್ಯಕರ್ತರು ಪಣ ತೊಟ್ಟಿದ್ದಾರೆ. ನನ್ನ ಅಧಿಕಾರದ ಅವಧಿಯಲ್ಲಿ ರಾಜ್ಯ ಕಂಡ ಅಭಿವೃದ್ದಿಯನ್ನು ಮುಂದಿಟ್ಟು ಕೊಂಡು ಮತಯಾಚಿಸಲಿದ್ದೇವೆ ಎಂದು ಎಚ್ಡಿಕೆ ತಿಳಿಸಿದ್ದಾರೆ.

ಹೆಗ್ಡೆ ನಾಮಪತ್ರ ಸಲ್ಲಿಕೆ: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಇಂದು (ಫೆ 27) ನೂರಾರು ಮಂದಿ ಕಾರ್ಯಕರ್ತರ ಜೊತೆ ಆಗಮಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಎಂ. ಟಿ.ರೇಜು ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+