ಮಾ.2ರೊಳಗೆ ರೆಡ್ಡಿ ಬೆಂಗಳೂರು ಸಿಬಿಐ ಕೋರ್ಟಿಗೆ

ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿರುವ Prisoner on Transit warrant ಅನ್ನು ಬೆಂಗಳೂರು ಸಿಬಿಐ deputy inspector general R. Hitendra ಅವರು ಆಂಧ್ರ ಜೈಲು ಪೊಲೀಸ್ ಮುಖ್ಯಸ್ಥ ಸುನಿಲ್ ಕುಮಾರ್ ಅವರಿಗೆ ಹಸ್ತಾಂತರಿಸಿದ್ದು, ಸಿಬಿಐ ಜಂಟಿ ನಿರ್ದೆಶಕ ವಿವಿ ಲಕ್ಷ್ಮಿನಾರಾಯಣ ಅವರ ಗಮನಕ್ಕೂ ತಂದಿದ್ದಾರೆ. ಮಾರ್ಚ್ 2ರೊಳಗಾಗಿ ರೆಡ್ಡಿಯನ್ನು ಕೋರ್ಟಿನಲ್ಲಿ ಹಾಜರುಪಡಿಸಬೇಕಾಗಿದೆ.
ಆದ್ದರಿಂದ ಬೆಂಗಳೂರು ಸಿಬಿಐ ತಂಡ ಇಂದೋ ಅಥವಾ ನಾಳೆಯೋ ಬೆಂಗಳೂರು ಕೋರ್ಟಿನಲ್ಲಿ ರೆಡ್ಡಿಯನ್ನು ಹಾಜರುಪಡಿಸುವ ಸಾಧ್ಯತೆಯಿದೆ. ನಂತರ, ಕೋರ್ಟ್ ಅವರನ್ನು ವಿಚಾರಣೆಗಾಗಿ ಸಿಬಿಐ ಕಸ್ಟಡಿಗೆ ಒಪ್ಪಿಸಿದರೆ ರೆಡ್ಡಿ ಸಿಬಿಐ ವಶಕ್ಕೆ ಹೋಗಬೇಕಾಗುತ್ತದೆ. ಇಲ್ಲವಾದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಬೇಕಾಗುತ್ತದೆ.
ಆ ನಂತರ ಹೈದರಾಬಾದ್ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದರೂ ರೆಡ್ಡಿ ಬೆಂಗಳೂರು ಜೈಲುವಾಸ ಮುಂದುವರಿಯಲಿದೆ. ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದಾಗ ಮಾತ್ರ ಅವರು ಸ್ವತಂತ್ರ ಹಕ್ಕಿಯಾಗಬಹುದು.
ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ಹಾಗೂ ಮಾಜಿ ಗಣಿ ಮಂತ್ರಿ ಶಿಡ್ಲಘಟ್ಟದ ಮುನಿಯಪ್ಪ ಸೇರಿದಂತೆ ಒಟ್ಟು 12 ಮಂದಿಯನ್ನು ಸಹ ಆರೋಪಿಗಳನ್ನಾಗಿಸಿದೆ. ಇದರಿಂದ ರೆಡ್ಡಿ ಪತ್ನಿ ಅರುಣಾ ಸೇರಿದಂತೆ ಎಲ್ಲರಿಗೂ ಸಮನ್ಸ್ ಜಾರಿ ಮಾಡಿದೆ.
ಪ್ರಕರಣ ಏನು?: ಅಸೋಸಿಯೇಟೆಡ್ ಮೈನಿಂಗ್ ಕಂಪನಿ (ಎಎಂಸಿ)ಯು ಕರ್ನಾಟಕದಲ್ಲಿ ನಡೆಸಿದ ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆ ನಡೆಸುವಂತೆ ಸುಪ್ರಿಂಕೋರ್ಟ್ ಕರ್ನಾಟಕದ ಸಿಬಿಐ ಪೊಲೀಸರಿಗೆ ನಿರ್ದೇಶಿಸಿತ್ತು. ನ್ಯಾಯಾಲಯದ ಆದೇಶದಂತೆ, ಕರ್ನಾಟಕದ ಸಿಬಿಐ ಪೊಲೀಸರು ಒಎಂಸಿ ಕಂಪನಿಯ ಮಾಲಿಕ ಜನಾರ್ದನ ರೆಡ್ಡಿ ವಿರುದ್ಧ ಕಳೆದ ಅಕ್ಟೋಬರ್ ತಿಂಗಳಲ್ಲಿ ಎಫ್ಐಆರ್ ದಾಖಲಿಸಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications