Get Updates
Get notified of breaking news, exclusive insights, and must-see stories!

ದಕ್ಷಿಣಭಾರತದ ಜನತೆಗೆ ಇಂದಿನಿಂದ ಗ್ಯಾಸ್ ಟ್ರಬಲ್ ಶುರು

Lorry Strike
ಬೆಂಗಳೂರು, ಫೆ 29: ತಮ್ಮ ಬೇಡಿಕೆಗಳಿಗೆ ಮುಷ್ಕರವೊಂದೇ ಪರಿಹಾರ ಅಂದುಕೊಂಡಂತಿರುವ ಲಾರೀ ಮಾಲೀಕರು ಬುಧವಾರ (ಫೆ 29) ಮಧ್ಯರಾತ್ರಿಯಿಂದ ಮತ್ತೊಮ್ಮೆ ಮಗುದೊಮ್ಮೆ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಿದ್ದಾರೆ. ಇದರಿಂದ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮತ್ತು ದಕ್ಷಿಣಭಾರತದಲ್ಲಿ ಅಡುಗೆ ಅನಿಲ ಸಿಲಿಂಡರ್‌ ಅಭಾವ ಸೃಷ್ಟಿಯಾಗಲಿದೆ.

ಈ ಬಗ್ಗೆ ದಕ್ಷಿಣ ವಲಯ ಮೋಟರ್‌ ಟ್ರಾನ್ಸ್ಪೋರ್ಟರ್ ವೆಲ್‌ಫೇರ್‌ ಅಸೋಷಿಯೇಷನ್‌ ಪ್ರಧಾನ ಕಾರ್ಯದರ್ಶಿ ಷಣ್ಮುಗಪ್ಪ ಮಾತನಾಡಿ, ಬುಧವಾರ ಮಧ್ಯರಾತ್ರಿಯಿಂದ ಮಂಗಳೂರು ಬಂದರಿನಿಂದ ಅಡುಗೆ ಅನಿಲ ಸರಬರಾಜು ಮಾಡುವ ಸುಮಾರು 3600ಕ್ಕೂ ಹೆಚ್ಚು ಟ್ಯಾಂಕರ್‌ ಲಾರಿಗಳು ಸಾಗಣೆ ಸ್ಥಗಿತಗೊಳಿಸಲಿವೆ. ಹಾಗಾಗಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗೆ ಅಡುಗೆ ಅನಿಲ ಸರಬರಾಜು ಆಗುವುದಿಲ್ಲ. ಕರ್ನಾಟಕಕ್ಕೆ ನಮ್ಮ ಲಾರಿಗಳು ಪ್ರತಿದಿನ ಸುಮಾರು 10 ಸಾವಿರ ಟನ್‌ ಗ್ಯಾಸ್‌ ಸರಬರಾಜು ಮಾಡುತ್ತಿವೆ. ನಮ್ಮ ಬೇಡಿಕೆಗಳು ಈಡೇರುವ ತನಕ ಮುಷ್ಕರ ಕೈಬಿಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಲಾರಿ ಮಾಲೀಕರ ಈ ಮುಷ್ಕರದಿಂದಾಗಿ ತೊಂದರೆ ಸೃಷ್ಟಿಯಾಗುವ ಸಾದ್ಯತೆ ದಟ್ಟವಾಗಿದೆ. ನಗರದಲ್ಲಿ ಅಡುಗೆ ಅನಿಲ ವಿತರಿಸುವ ಇಂಡಿಯನ್‌ ಆಯಿಲ್‌, ಎಚ್‌ಪಿ ಮತ್ತು ಭಾರತ್‌ ಗ್ಯಾಸ್‌ ಕಂಪನಿ ತಲಾ ಒಂದೊಂದು ಶೇಖರಣೆ ಮತ್ತು ರೀಫಿಲ್ಲಿಂಗ್‌ ಘಟಕಗಳನ್ನು ಹೊಂದಿವೆ.

ಇಂಡಿಯನ್‌ ಗ್ಯಾಸ್‌ ಕಂಪನಿ ಮಾಲೂರಿನ ದೇವನಗುಂಡಿಯಲ್ಲಿ ತನ್ನ ಘಟಕ ಹೊಂದಿದ್ದರೆ, ಹಿಂದುಸ್ತಾನ್ ಪೆಟ್ರೋಲಿಯಂ ಮಹದೇವಪುರದಲ್ಲಿ ಮತ್ತು ಭಾರತ್‌ ಗ್ಯಾಸ್‌ ನೆಲಮಂಗಲದಲ್ಲಿ ಸಂಗ್ರಹಣಾ ಘಟಕ ಹೊಂದಿವೆ. ಅದರಲ್ಲಿ ಭಾರತ್ ಮತ್ತು ಎಚ್‌ಪಿ ಸಂಪೂರ್ಣವಾಗಿ ರಸ್ತೆಯನ್ನೇ ಅವಲಂಬಿಸಿಕೊಂಡಿದೆ. ಐಓಸಿ ಮಾತ್ರ ಅಡುಗೆ ಅನಿಲ ಸರಬಾರಾಜಿಗೆ ರೈಲನ್ನು ಹೆಚ್ಚು ಅವಲಂಬಿಸಿಕೊಂಡಿದೆ. ಹೀಗಾಗಿ, ಲಾರಿ ಮುಷ್ಕರ ಎಚ್‌ಪಿ ಮತ್ತು ಭಾರತ್‌ ಗ್ಯಾಸ್‌ ಕಂಪನಿ ಗ್ರಾಹಕರನ್ನು ಹೆಚ್ಚು ಬಾಧಿಸಲಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+