ದಕ್ಷಿಣಭಾರತದ ಜನತೆಗೆ ಇಂದಿನಿಂದ ಗ್ಯಾಸ್ ಟ್ರಬಲ್ ಶುರು

ಈ ಬಗ್ಗೆ ದಕ್ಷಿಣ ವಲಯ ಮೋಟರ್ ಟ್ರಾನ್ಸ್ಪೋರ್ಟರ್ ವೆಲ್ಫೇರ್ ಅಸೋಷಿಯೇಷನ್ ಪ್ರಧಾನ ಕಾರ್ಯದರ್ಶಿ ಷಣ್ಮುಗಪ್ಪ ಮಾತನಾಡಿ, ಬುಧವಾರ ಮಧ್ಯರಾತ್ರಿಯಿಂದ ಮಂಗಳೂರು ಬಂದರಿನಿಂದ ಅಡುಗೆ ಅನಿಲ ಸರಬರಾಜು ಮಾಡುವ ಸುಮಾರು 3600ಕ್ಕೂ ಹೆಚ್ಚು ಟ್ಯಾಂಕರ್ ಲಾರಿಗಳು ಸಾಗಣೆ ಸ್ಥಗಿತಗೊಳಿಸಲಿವೆ. ಹಾಗಾಗಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗೆ ಅಡುಗೆ ಅನಿಲ ಸರಬರಾಜು ಆಗುವುದಿಲ್ಲ. ಕರ್ನಾಟಕಕ್ಕೆ ನಮ್ಮ ಲಾರಿಗಳು ಪ್ರತಿದಿನ ಸುಮಾರು 10 ಸಾವಿರ ಟನ್ ಗ್ಯಾಸ್ ಸರಬರಾಜು ಮಾಡುತ್ತಿವೆ. ನಮ್ಮ ಬೇಡಿಕೆಗಳು ಈಡೇರುವ ತನಕ ಮುಷ್ಕರ ಕೈಬಿಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಲಾರಿ ಮಾಲೀಕರ ಈ ಮುಷ್ಕರದಿಂದಾಗಿ ತೊಂದರೆ ಸೃಷ್ಟಿಯಾಗುವ ಸಾದ್ಯತೆ ದಟ್ಟವಾಗಿದೆ. ನಗರದಲ್ಲಿ ಅಡುಗೆ ಅನಿಲ ವಿತರಿಸುವ ಇಂಡಿಯನ್ ಆಯಿಲ್, ಎಚ್ಪಿ ಮತ್ತು ಭಾರತ್ ಗ್ಯಾಸ್ ಕಂಪನಿ ತಲಾ ಒಂದೊಂದು ಶೇಖರಣೆ ಮತ್ತು ರೀಫಿಲ್ಲಿಂಗ್ ಘಟಕಗಳನ್ನು ಹೊಂದಿವೆ.
ಇಂಡಿಯನ್ ಗ್ಯಾಸ್ ಕಂಪನಿ ಮಾಲೂರಿನ ದೇವನಗುಂಡಿಯಲ್ಲಿ ತನ್ನ ಘಟಕ ಹೊಂದಿದ್ದರೆ, ಹಿಂದುಸ್ತಾನ್ ಪೆಟ್ರೋಲಿಯಂ ಮಹದೇವಪುರದಲ್ಲಿ ಮತ್ತು ಭಾರತ್ ಗ್ಯಾಸ್ ನೆಲಮಂಗಲದಲ್ಲಿ ಸಂಗ್ರಹಣಾ ಘಟಕ ಹೊಂದಿವೆ. ಅದರಲ್ಲಿ ಭಾರತ್ ಮತ್ತು ಎಚ್ಪಿ ಸಂಪೂರ್ಣವಾಗಿ ರಸ್ತೆಯನ್ನೇ ಅವಲಂಬಿಸಿಕೊಂಡಿದೆ. ಐಓಸಿ ಮಾತ್ರ ಅಡುಗೆ ಅನಿಲ ಸರಬಾರಾಜಿಗೆ ರೈಲನ್ನು ಹೆಚ್ಚು ಅವಲಂಬಿಸಿಕೊಂಡಿದೆ. ಹೀಗಾಗಿ, ಲಾರಿ ಮುಷ್ಕರ ಎಚ್ಪಿ ಮತ್ತು ಭಾರತ್ ಗ್ಯಾಸ್ ಕಂಪನಿ ಗ್ರಾಹಕರನ್ನು ಹೆಚ್ಚು ಬಾಧಿಸಲಿವೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications