ವಕೀಲರ ಪುಂಡಾಟ, ಕಾಣದ 'ಕೈ'ವಾಡ: ಯಡ್ಡಿ

ಪತ್ರಕರ್ತರ ಮೇಲೆ ಹಲ್ಲೆ ಮಾಡುವುದು ಹೀನ ಕೃತ್ಯ.ಘಟನೆಗೆ ಕಾರಣರಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಜರುಗಿಸಲಿದೆ. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಸಂಚು ನಡೆಸುವ ಒಂದು ಗುಂಪು ಮೊದಲಿನಿಂದಲೂ ಈ ರೀತಿ ಕೆಲಸದಲ್ಲಿ ನಿರತವಾಗಿದೆ ಎಂದು ಯಡಿಯೂರಪ್ಪ ಹೇಳಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ನಾನು ಅಧಿಕಾರದಲ್ಲಿದ್ದಾಗಲೂ ಈ ರೀತಿ ಗಲಭೆ, ಗಲಾಟೆ ನಡೆಸುವವರನ್ನು ಕಂಡಿದ್ದೇನೆ. ಆದರೆ, ಬಿಜೆಪಿ ಸರ್ಕಾರ ಹಿಂದಿನ ಯಾವ ಸರ್ಕಾರಗಳು ಕೈಗೊಳ್ಳದ ಕಠಿಣ ಕ್ರಮ ಕೈಗೊಂಡಿದೆ.
ಯಾರು ತಪ್ಪು ಮಾಡಿದ್ದರೂ ಶಿಕ್ಷೆ ಖಚಿತ. ಮಾಧ್ಯಮಗಳು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸುವ ರೀತಿ ವಾತಾವರಣ ನಿರ್ಮಾಣ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಯಡಿಯೂರಪ್ಪ ಹೇಳಿದರು.












Click it and Unblock the Notifications