ವಕೀಲರ ವಿರುದ್ಧ ಪತ್ರಕರ್ತರ ಸಮರ: ಡೆ-4

ಇದೇ ವೇಳೆ ರಾಜ್ಯದ ಉದ್ದಗಲಕ್ಕೂ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿದ್ದು, ಆಯಾ ಭಾಗಗಳ ಪತ್ರಕರ್ತರು ಮೆರವಣಿಗೆ ನಡೆಸಿದ್ದಾರೆ. ಈ ಮಧ್ಯೆ ಬೆಳಗಾವಿ ಡಿಸಿ ಕಚೇರಿ ಬಳಿ ಪತ್ರಕರ್ತರು ನಡೆಸುತ್ತಿದ್ದ ಶಾಂತಿಯುತ ಮೆರವಣಿಗೆಗೆ ಸ್ಥಳೀಯ ವಕೀಲರು ಪ್ರತಿರೋಧ ಒಡ್ಡಿದರು.
ಇದರಿಂದ ಕೆಲಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಆದರೆ ಪೊಲೀಸರು ಸಕಾಲಿಕವಾಗಿ ಮಧ್ಯಪ್ರವೇಶಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಿದರು. ರಾಜ್ಯದ ಕೆಲವೆಡೆ ಕೆಲ ವಕೀಲರು ಪತ್ರಿಕೆಯ ಬಂಡಲ್ ಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ಸುವರ್ಣ ನ್ಯೂಸ್ ಚಾನೆಲಿನ ಮುಖ್ಯಸ್ಥ ವಿಶ್ವೇಶ್ವರ್ ಭಟ್ ಅವರು ' ಪ್ರಕರಣವು ನ್ಯಾಯಾಂಗ ತನಿಖೆಗೇ ಸೀಮಿತವಾಗುವುದು ಬೇಡ. ಈ ವಿಷಯದಲ್ಲಿ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ, ಹೋರಾಟ ನಿಲ್ಲಲ್ಲ' ಎಂದು ಸ್ಪಷ್ಟಪಡಿಸಿದರು. 'ಪತ್ರಕರ್ತರಿಗೆ ಸಂಪೂರ್ಣ ಭದ್ರತೆ ಒದಗಿಸಬೇಕು. ರಕ್ಷಣೆ ಕಲ್ಪಿಸದ ಹೊರತು ಮಾಧ್ಯಮಗಳು ಕೋರ್ಟ್ ಕಲಾಪಗಳ ವರದಿ ಮಾಡುವುದಿಲ್ಲ' ಎಂದೂ ಭಟ್ ಮೆರವಣಿಗೆಯನ್ನು ಉದ್ದೇಶಿಸಿ ಹೇಳಿದರು.
ಪೂರ್ವಭಾವಿ ಸಭೆ: ಈ ಮಧ್ಯೆ, ವಕೀಲರ ಪುಂಡಾಟಿಕೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸದಾನಂದರು ಪತ್ರಕರ್ತರು, ವಕೀಲರು, ಪೊಲೀಸರು ಮತ್ತು ಕಾನೂನು ಸಚಿವರ ಸಭೆ ಕರೆದಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ವಿಶ್ವೇಶ್ವರ್ ಭಟ್ ನೇತೃತ್ವದಲ್ಲಿ ಪತ್ರಕರ್ತರು ಖಾಸಗಿ ಹೋಟೆಲಿನಲ್ಲಿ ಸಭೆ ನಡೆಸಿದರು.
ಮುಖ್ಯ ನ್ಯಾಯಾಧೀಶರಿಗೆ ಮನವಿ: ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಕ್ರಮ್ ಜಿತ್ ಸೇನ್ ಅವರನ್ನು ಭೇಟಿ ಮಾಡಿದ ಪತ್ರಕರ್ತರು ವಕೀಲರ ಪುಂಡಾಟಿಕೆಯ ಬಗ್ಗೆ ಗಮನ ಸೆಳೆದರು. ಸುವರ್ಣ ನ್ಯೂಸ್ ಸಂಪಾದಕ ವಿಶ್ವೇಶ್ವರ್ ಭಟ್, ಜನಶ್ರೀ ಅನಂತ್ ಚಿನಿವಾರ್, ಟಿವಿ9 ಮಹೇಂದ್ರ ಮಿಶ್ರಾ, ಸಮಯ ಚಾನೆಲಿನ ಶಿವಪ್ರಸಾದ್, ಉದಯ ನ್ಯೂಸ್ ಸಮೀವುಲ್ಲಾ, ಎನ್ ಡಿಟಿವಿ ಮಾಯಾಶರ್ಮಾ, ಕನ್ನಡ ಪ್ರಭ ಸಹಸಂಪಾದಕ ಪಿ. ತ್ಯಾಗರಾಜ್, ವರದಿಗಾರರ ಒಕ್ಕೂಟದ ಪ್ರಭಾಕರ್, ಸಂಯುಕ್ತ ಕರ್ನಾಟಕ ಸಂಪಾದಕ ಹುಣಸವಾಡಿ ರಾಜನ್, ಆಜ್ ತಕ್ ಚಾನೆಲಿನ ಖುರೇಶಿ ಮುಂತಾದವರು ಭಾಗವಹಿಸಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications