ಡಿಕೆಶಿ ತಲೆಮೇಲೆ 183 ಕೋಟಿ ರೂ ಭೂಚಕ್ರ

ಇಂದಿರಾನಗರದ ಸಮೀಪ ಬೆನ್ನಿಗಾನಹಳ್ಳಿಯಲ್ಲಿ ಸರ್ವೆ ನಂಬರ್ 20ರ 4.20 ಎಕರೆ ಭೂಮಿಯನ್ನು ಕಾನೂನುಬಾಹಿರವಾಗಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿದ್ದಾರೆ ಎಂದು ಆರೋಪಿಸಿ, ಅಬ್ರಹಾಂ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಸೋಮವಾರ ಖಾಸಗಿ ದೂರು ಸಲ್ಲಿಸಿದ್ದಾರೆ.
ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯಕ್ಕೆ ಹಲವು ದಾಖಲೆಗಳ ಸಮೇತ ದೂರು ಸಲ್ಲಿಸಿರುವ ಅಬ್ರಹಾಂ, 4.20 ಎಕರೆ ಭೂಮಿಯನ್ನು ಕಾನೂನಿಗೆ ವಿರುದ್ಧವಾಗಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟ ಪರಿಣಾಮವಾಗಿ ಸರ್ಕಾರಕ್ಕೆ 183 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರಿಂದ ತನಿಖೆ ನಡೆಸುವಂತೆ ಕೋರಿದ್ದಾರೆ. ದೂರನ್ನು ವಿಚಾರಣೆಗೆ ಸ್ವೀಕರಿಸುವ ಸಂಬಂಧ ಬುಧವಾರ ಆದೇಶ ಹೊರಡಿಸುವುದಾಗಿ ಪ್ರಕಟಿಸಿದ ನ್ಯಾಯಾಧೀಶ ಎನ್.ಕೆ. ಸುಧೀಂದ್ರ ರಾವ್, ವಿಚಾರಣೆಯನ್ನು ಮುಂದೂಡಿದರು.
ದೂರಿನ ಸಾರಾಂಶ: ಎನ್ಜಿಇಎಫ್ ಬಡಾವಣೆ ನಿರ್ಮಾಣಕ್ಕಾಗಿ ಬೆನ್ನಿಗಾನಹಳ್ಳಿಯ ಬಿ.ಕೆ.ಶ್ರೀನಿವಾಸನ್ ಅವರ 4.20 ಎಕರೆ ಭೂಮಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) 1986ರಲ್ಲಿ ಸ್ವಾಧೀನಪಡಿಸಿಕೊಂಡಿತ್ತು. ಆದರೆ, ಭೂಮಿ ಬಿಡಿಎ ಸ್ವಾಧೀನದಲ್ಲಿರುವಾಗಲೇ 2003ರಲ್ಲಿ ಶಿವಕುಮಾರ್ ಅದನ್ನು ಖರೀದಿಸಿದ್ದರು. ಖರೀದಿ ಸಂದರ್ಭದಲ್ಲಿ ಸಚಿವರಾಗಿದ್ದ ಅವರು, ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದರು ಎಂಬ ಆರೋಪ ದೂರಿನಲ್ಲಿದೆ.
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ಶಿವಕುಮಾರ್ ಅವರು ಶ್ರೀನಿವಾಸನ್ ಹೆಸರಿನಲ್ಲಿ ಅರ್ಜಿ ಸಲ್ಲಿಸಿ, ಬೆನ್ನಿಗಾನಹಳ್ಳಿಯ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವಂತೆ ಮನವಿ ಮಾಡಿದ್ದರು. ಈ ಅರ್ಜಿಯನ್ನು ಮಾನ್ಯ ಮಾಡಿದ ಯಡಿಯೂರಪ್ಪ, 4.20 ಎಕರೆ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟು 2010ರ ಮೇ 13ರಂದು ಆದೇಶ ಹೊರಡಿಸಿದ್ದರು.
ಅರ್ಜಿ ಸಲ್ಲಿಸುವಾಗಲೇ ಶ್ರೀನಿವಾಸನ್ ಮೃತರಾಗಿದ್ದರು. ಈ ಸಂಗತಿಯನ್ನು ಮುಚ್ಚಿಟ್ಟು ಆದೇಶ ಪಡೆಯುವಲ್ಲಿ ಯಶಸ್ವಿಯಾಗಿದ್ದರು ಎಂದು ದೂರಿದ್ದಾರೆ. ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವ ಮುನ್ನವೇ ಅಲ್ಲಿ ಜಂಟಿ ಪಾಲುದಾರಿಕೆ ಯೋಜನೆಗಾಗಿ ರಿಯಲ್ ಎಸ್ಟೇಟ್ ಕಂಪನಿ ಜೊತೆ ಶಿವಕುಮಾರ್ ಒಪ್ಪಂದ ಮಾಡಿಕೊಂಡಿದ್ದರು. ಕಾನೂನುಬಾಹಿರ ಆದೇಶ ಪಡೆಯುವ ಸಂಚು ಮೊದಲೇ ನಡೆದಿತ್ತು ಎಂಬುದಕ್ಕೆ ಇದು ಸಾಕ್ಷ್ಯ ಒದಗಿಸುತ್ತದೆ ಎಂದು ಅಬ್ರಹಾಂ ಆರೋಪಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications