ಈಗಲೂ ಲೋಕಾಯುಕ್ತ ವರದಿಗೆ ಬದ್ಧ: ಸಂತೋಷ್ ಹೆಗ್ಡೆ
ಆದರೆ, ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತ ಸಂಸ್ಥೆ ನೀಡಿದ ಎರಡನೇ ವರದಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ಯಡಿಯೂರಪ್ಪ ಮತ್ತು ಅವರ ಕುಟುಂಬ ಮೈನಿಂಗ್ ಕಂಪನಿಗಳಿಂದ ಅಕ್ರಮವಾಗಿ ಹಣ ಪಡೆದಿರುವುದು ಸತ್ಯ ಎಂದು ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಒಂದು ಮೈನಿಂಗ್ ಕಂಪನಿ ಶಿವಮೊಗ್ಗದಲ್ಲಿರುವ ಯಡಿಯೂರಪ್ಪ ಅವರ ಕುಟುಂಬದ ಪ್ರೇರಣಾ ಟ್ರಸ್ಟ್ ಗೆ 10 ಕೋಟಿ ರು ದಾನ ಮಾಡಿದೆ. ಯಡಿಯೂರಪ್ಪ ಅಳಿಯಂದಿರಿಂದ ರಾಚೇನಹಳ್ಳಿಯಲ್ಲಿ ಡಿ ನೋಟಿಫಿಕೇಷನ್ ಆದ ಭೂಮಿಯನ್ನು ಅದೇ ಕಂಪನಿ 20 ಕೋಟಿ ರು ಕೊಟ್ಟು ಖರೀದಿಸಿದೆ.
ಸಾಕ್ಷ್ಯಾಧಾರಗಳ ಕೊರತೆ: ನ್ಯಾಯಾಲಯಕ್ಕೆ ಸೂಕ್ತ ದಾಖಲೆಗಳು ಸಿಕ್ಕಿಲ್ಲ ಎನ್ನುವುದನ್ನು ನಾನು ಒಪ್ಪುವುದಿಲ್ಲ. ಚೆಕ್ ರೂಪದಲ್ಲಿ ದಾನ ನೀಡಿರುವುದನ್ನು ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.
ಹೈಕೋರ್ಟ್ ನೀಡಿರುವ ವರದಿಯ ತಪ್ಪು ಒಪ್ಪುಗಳನ್ನು ಮೇಲಿನ ಕೋರ್ಟ್ ನಿರ್ಧರಿಸಲಿ. ಲೋಕಾಯುಕ್ತ ವರದಿ ಅಂಶಗಳನ್ನು ಜನತಾ ನ್ಯಾಯಾಲಯದ ವಿವೇಚನೆಗೆ ಬಿಟ್ಟಿದ್ದೇನೆ. ಆದರೆ, 25 ಸಾವಿರ ಪುಟಗಳ ಗಣಿ ಅಕ್ರಮ ವರದಿಯನ್ನು ಸರ್ಕಾರ ಇನ್ನೂ ಸ್ವೀಕರಿಸದಿರುವುದು ಬೇಸರ ತರಿಸಿದೆ ಎಂದು ನ್ಯಾ. ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.