ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ತನಿಖೆ

By Mahesh
|
Google Oneindia Kannada News

Dk Shivakumar
ಬೆಂಗಳೂರು, ಮಾ.7: ಕರ್ನಾಟಕ ಭ್ರಷ್ಟಾಚಾರ ವಿರೋಧಿ ವೇದಿಕೆಯ ಟಿ.ಜೆ.ಅಬ್ರಹಾಂ ಅವರು ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಹೊರೆಸಿದ 183 ಕೋಟಿ ರು ಆರೋಪಕ್ಕೆ ಬೆಲೆ ಸಿಕ್ಕಿದೆ. ಡಿಕೆ ಶಿವಕುಮಾರ್ ವಿರುದ್ಧ ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಪೊಲೀಸರಿಗೆ ಬುಧವಾರ(ಮಾ.7) ಆದೇಶಿಸಿದೆ.

ಇಂದಿರಾನಗರದ ಸಮೀಪ ಬೆನ್ನಿಗಾನಹಳ್ಳಿಯಲ್ಲಿ ಸರ್ವೆ ನಂಬರ್ 20ರ 4.20 ಎಕರೆ ಭೂಮಿಯನ್ನು ಕಾನೂನುಬಾಹಿರವಾಗಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿದ್ದಾರೆ ಎಂದು ಆರೋಪಿಸಿ, ಅಬ್ರಹಾಂ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಸೋಮವಾರ(ಮಾ.5) ಖಾಸಗಿ ದೂರು ಸಲ್ಲಿಸಿದ್ದರು.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಶಿವಕುಮಾರ್ ಅವರು ಶ್ರೀನಿವಾಸನ್ ಹೆಸರಿನಲ್ಲಿ ಅರ್ಜಿ ಸಲ್ಲಿಸಿ, ಬೆನ್ನಿಗಾನಹಳ್ಳಿಯ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವಂತೆ ಮನವಿ ಮಾಡಿದ್ದರು.

ಈ ಅರ್ಜಿಯನ್ನು ಮಾನ್ಯ ಮಾಡಿದ್ದ ಯಡಿಯೂರಪ್ಪ, 4.20 ಎಕರೆ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟು 2010ರ ಮೇ 13ರಂದು ಆದೇಶ ಹೊರಡಿಸಿದ್ದರು.

NGEF ವಸತಿ ಬಡಾವಣೆ ನಿರ್ಮಾಣಕ್ಕೆ ಬಿಡಿಎ ಈ ಭೂಮಿಯನ್ನು 1986ರಲ್ಲಿ ಗುರುತಿಸಿತ್ತು.

English summary
Lokayukta court today ordered probe against senior Congress leader DK Shiva Kumar accused of getting government land illegally denotified for pecuniary gain. During the Yeddyurappa's tenure land near Benegenahalli, Indira Nagar was denotified which was earlier notified by BDA for formation of NGEF residential layout in 1986.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X