ಪರಿಶಿಷ್ಟ ವರ್ಗದ ಮಠಾಧೀಶರಿಂದ ಸದಾನಂದ ಗೌಡ ಭೇಟಿ

ಬೋವಿ, ಕುರುಬ, ಈಡಿಗ ಸಮುದಾಯಕ್ಕೆ ಸೇರಿದ ಸುಮಾರು 20ಕ್ಕೂ ಹೆಚ್ಚು ಕಾವಿಧಾರಿ ಸ್ವಾಮೀಜಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಬಜೆಟ್ನಲ್ಲಿ ತಮ್ಮ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ ಮತ್ತು ಬಾಲಚಂದ್ರ ಜಾರಕಿಹೊಳಿ ಉಪಸ್ಥಿತರಿದ್ದರು.
ಹಿಂದುಳಿದ ವರ್ಗಕ್ಕೆ ಖಂಡಿತ ಹೆಚ್ಚಿನ ಅನುದಾನವನ್ನು ಬಜೆಟ್ಟಲ್ಲಿ ದೊರಕಿಸಿಕೊಡುವುದಾಗಿ ಗೌಡರು ಭರವಸೆ ನೀಡಿರುವುದಾಗಿ, ಭೇಟಿಯ ನಂತರ ನಿರಂಜನ ಸ್ವಾಮೀಜಿ ಮಾಧ್ಯಮಗಳಿಗೆ ತಿಳಿಸಿದರು. ಉಡುಪಿ-ಚಿಕ್ಕಮಗಳೂರು ಲೋಕಸಭೆ ಉಪಚುನಾವಣೆಯ ಮತಎಣಿಕೆಯ ದಿನವೇ ಸದಾನಂದ ಗೌಡರು ತಮ್ಮ ಪ್ರಥಮ ಬಜೆಟ್ ಮಂಡಿಸಲಿದ್ದಾರೆ.











Click it and Unblock the Notifications