ಜಗನ್ ಅಕ್ರಮ ಆಸ್ತಿ, 6 ಸಚಿವರಿಗೆ ಸುಪ್ರೀಂ ನೋಟಿಸ್

ಜಗನ್ ಅಕ್ರಮ ಆಸ್ತಿ ಪ್ರಕರಣದಲ್ಲಿ 6 ಜನ ಸಚಿವರು ಹಾಗೂ 8 ಐಎಎಸ್ ಅಧಿಕಾರಿಗಳ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳಿದ್ದರೂ, ಸಿಬಿಐ ಕ್ರಮ ಕೈಗೊಂಡಿಲ್ಲ ಎಂದು ವಕೀಲರೊಬ್ಬರು ಆರೋಪಿಸಿದ್ದರು.
ವಕೀಲ ಸುಧಾಕರ ರೆಡ್ಡಿ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಬಲವೀರ್ ಭಂಡಾರಿ ನ್ಯಾಯಪೀಠ, ಸೋಮವಾರ ಆಂಧ್ರಪ್ರದೇಶ ಸರ್ಕಾರದ ಆರು ಜನ ಸಚಿವರು ಸೇರಿದಂತೆ, 8 ಜನ ಐಎಎಸ್ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ಇದಕ್ಕೂ ಮುನ್ನ ಜಗನ್ ಮೇಲೆ ಸಿಬಿಐ ದಾಳಿ ಕಂಡು, ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಜಗನ್ ಕಂಪನಿಗಳಲ್ಲಿ ಬಂಡವಾಳ ಹೂಡಿಕೆ ಮಾಡಿರುವ ದೊಡ್ಡ ದೊಡ್ಡ ಉದ್ಯಮಿಗಳು ಆತಂಕ ವ್ಯಕ್ತಪಡಿಸಿದ್ದರು.(ಪಿಟಿಐ)












Click it and Unblock the Notifications