ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಯ ಸುನಿಲ್‌ ಕುಮಾರ್ ಜೆಡಿಎಸ್ ಕ್ಯಾಂಡಿಡೇಟಾ?

By Srinath
|
Google Oneindia Kannada News

udupi-chikmagalur-bypolls-sunilkumar-jds-candidate-dks
ಬೆಂಗಳೂರು,ಮಾ.13: ಅತ್ತ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ ಎಂದೇ ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ. ಆದರೆ ಈ ಹಂತದಲ್ಲಿ ರಾಜಕೀಯ ನಾಯಕರೊಬ್ಬರು ಹೇಳುವ ಮಾತೇ ಬೇರೆ. ಆ ನಾಯಕರ ಪ್ರಕಾರ ಬಿಜೆಪಿಯ ಅಭ್ಯರ್ಥಿ ವಿ ಸುನಿಲ್ ಕುಮಾರ್ ಜೆಡಿಎಸ್ ಕ್ಯಾಂಡಿಡೇಟ್ ಅಂತೆ? ಇದಕ್ಕೆ ಜೆಡಿಎಸ್ ನಾಯಕರೇ ಉತ್ತರಿಸಬೇಕು.

ಆದರೆ ಕ್ಷೇತ್ರದ ಮತದಾರನ ಮಾಹಿತಿಗಾಗಿ ಹೇಳುವುದಾದರೆ 'ಕಾಂಗ್ರೆಸ್ ಪಕ್ಷವನ್ನು ಸೋಲಿಸಬೇಕೆಂಬ ದುರುದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ಒಳಒಪ್ಪಂದ ಮಾಡಿಕೊಂಡಿವೆ' ಎಂದು ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಇದಕ್ಕೆ ಅವರು ಕೊಡುವ ಪುರಾವೆ - ಬಿಜೆಪಿ ಅಭ್ಯರ್ಥಿ ಸುನಿಲ್‌ ಕುಮಾರ್ ಮತ್ತು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ನಡುವೆ ಹಿಂದಿನಿಂದಲೂ ನಂಟಿದೆ. ಈಗಲೂ ಅದು ಮುಂದುವರಿದಿದ್ದು, ಚುನಾವಣೆಯಲ್ಲಿ ರಹಸ್ಯವಾಗಿ ಕೈಜೋಡಿಸಿಕೊಂಡಿದ್ದಾರೆ ಎಂಬುದು.

'ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಸುನಿಲ್‌ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ಆಗ ಬೆಂಗಳೂರಿನ ಕೆಂಗೇರಿ ಹೋಬಳಿಯ ವಳಗೆರೆಹಳ್ಳಿಯ ಸರ್ವೆ ನಂಬರ್ 80/1 ಮತ್ತು 80/2ರಲ್ಲಿ ಹೇಮರಾಜು, ಗಂಗಾಧರ, ನಾರಾಯಣಸ್ವಾಮಿ ಮತ್ತಿತರರಿಗೆ ಸೇರಿದ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವಂತೆ ಕುಮಾರಸ್ವಾಮಿ ಅವರಿಗೆ ಸುನಿಲ್‌ ಕುಮಾರ್ ಪತ್ರ ಬರೆದಿದ್ದರು.

ಅದನ್ನು ಶಿರಸಾವಹಿಸಿ ಪಾಲಿಸಿದ ಕುಮಾರಸ್ವಾಮಿ ಕಾನೂನು ಉಲ್ಲಂಘಿಸಿ ಈ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿದ್ದರು ಎಂದು ಆರೋಪಿಸಿದ ಶಿವಕುಮಾರ್, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನೂ ಬಿಡುಗಡೆ ಮಾಡಿದರು. ಇದಕ್ಕೆ ಕುಮಾರಣ್ಣ ಏನನ್ನುತ್ತಾರೆ?

English summary
Udupi Chikmagalur bypolls- BJP's V Sunil Kumar is JDS candidate says DK Shivakumar, Congress leader.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X