ಹುರ್ರೆ, ಆದಾಯ ತೆರಿಗೆ ಮಿತಿ 2 ಲಕ್ಷ ರು.ಗೆ ಏರಿಕೆ

ಇದರ ಪ್ರಕಾರ, 2 ಲಕ್ಷ ರು.ವರೆಗೆ ಸಂಬಳ ಪಡೆಯುವವರು ಆದಾಯ ತೆರಿಗೆ ಕಟ್ಟಬೇಕಾಗಿಲ್ಲ. 2ರಿಂದ 5 ಲಕ್ಷ ರು. ಸಂಬಳ ಪಡೆಯುವವರು ಶೇ.10ರಷ್ಟು ತೆರಿಗೆ ಕಟ್ಟಬೇಕು. 5 ಲಕ್ಷ ರು.ನಿಂದ 10 ಲಕ್ಷ ರು. ಸಂಬಳ ಗಳಿಸುವವರು ಶೇ.20ರಷ್ಟು ಮತ್ತು 10 ಲಕ್ಷ ರು.ಗಿಂತ ಹೆಚ್ಚು ಆದಾಯ ಪಡೆಯುವವರು ಶೇ.30ರಷ್ಟು ಸಂಬಳ ಪಡೆಯಬೇಕು.
ಕಳೆದ ಮುಂಗಡ ಪತ್ರದಲ್ಲಿ ಶೇ.20ರಷ್ಟು ತೆರಿಗೆ ಕಟ್ಟಬೇಕಾದವರ ಆದಾಯ ಮಿತಿಯನ್ನು 8 ಲಕ್ಷಕ್ಕೆ ನಿಗದಿಪಡಿಸಲಾಗಿತ್ತು. ಈ ಬಾರಿ ಆ ವರ್ಗದವರಿಗೆ ಭರ್ತಿ 2 ಲಕ್ಷ ರು. ಏರಿಕೆ ದೊರೆತಿದೆ. ಅಂದರೆ, ಕಳೆದ ಬಾರಿ 8 ಲಕ್ಷಕ್ಕಿಂತ ಹೆಚ್ಚಿಗೆ ಆದಾಯವಿದ್ದ ನೌಕರರು ಶೇ.20ರಷ್ಟು ತೆರಿಗೆ ಕಟ್ಟಬೇಕಾಗಿತ್ತು. ಆದರೆ, ಈ ಬಾರಿಯಿಂದ 10 ಲಕ್ಷ ರು.ಗಿಂತ ಆದಾಯ ಹೆಚ್ಚಿರುವವರು ಶೇ.20ರಷ್ಟು ತೆರಿಗೆ ಕಟ್ಟಬೇಕು.
ಆದಾಯ ತೆರಿಗೆ ಮಿತಿಯನ್ನು 2 ಲಕ್ಷ ರು.ಗೆ ಏರಿಸಿದ್ದಾರಾದರೂ, ಇದು ಮಹಿಳಾ ನೌಕರರಿಗೆ ಮತ್ತು ಹಿರಿಯ ನಾಗರಿಕರಿಗೂ ಅನ್ವಯವಾಗುತ್ತದಾ ಎಂಬುದನ್ನು ಪ್ರಣಬ್ ಮುಖರ್ಜಿ ಪ್ರಸ್ತಾಪಿಸಿಲ್ಲ. ಮತ್ತೊಂದು ಗಮನಾರ್ಹ ಸಂಗತಿಯೆಂದರೆ, 5 ಲಕ್ಷ ರು.ವರೆಗೆ ಸಂಬಳ ಪಡೆಯುವವರು ಯಾವುದೇ ಇನ್ಕಂ ಟ್ಯಾಕ್ಸ್ ರಿಟರ್ನ್ ಫಾರಂ ತುಂಬಬೇಕಾಗಿಲ್ಲ.
ರಿಟರ್ನ್ ಫೈಲ್ ಮಾಡುವುದು ಕ್ಷೇಮ : 5 ಲಕ್ಷಕ್ಕಿಂತ ಕಡಿಮೆ ಆದಾಯ ಇರುವವರು ರಿಟರ್ನ್ ಫೈಲ್ ಮಾಡಬೇಕಾಗಿಲ್ಲವಾದರೂ, ನಮ್ಮ ಹೂಡಿಕೆಯ ಆಧಾರದ ಮೇಲೆ ರಿಫಂಡ್ ಬರಬೇಕಿದ್ದರೆ ಅಥವಾ ಯಾವುದೇ ಸಾಲ ಪಡೆಯಲು ಯತ್ನಿಸುತ್ತಿದ್ದರೆ ಅಂಥವರು ಇನ್ಕಂ ಟ್ಯಾಕ್ಸ್ ರಿಟರ್ನ್ ಫೈಲ್ ಮಾಡುವುದು ಒಳಿತು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications