ಮಂಗಳವಾರ ವಿಧಾನಸೌಧಕ್ಕೆ ವಕೀಲರ ಮುತ್ತಿಗೆ

ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಧಾನಸೌಧ ಚಲೋ ಕೈಗೊಳ್ಳುವುದು ವಕೀಲರ ಸಂಘದ ಉದ್ದೇಶ. ಈ ಸಂಬಂಧ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಟಾರೆಡ್ಡಿ ಅವರು ಅನುಮತಿ ಕೋರಿ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದರು.
ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಮುತ್ತ 2 ಕಿ.ಮೀ.ವ್ಯಾಪ್ತಿಯಲ್ಲಿ ಮಾ.25ರ ಮಧ್ಯರಾತ್ರಿಯವರಗೆ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಯಲ್ಲಿರುತ್ತದೆ. ಆದ ಕಾರಣ ವಕೀಲರ ಪ್ರತಿಭಟನೆಗೆ ಅನುಮತಿ ನಿರಾಕರಿಸಲಾಗಿದೆ.
ಇದೇ ವೇಳೆ, ಪೊಲೀಸ್ ಇಲಾಖೆಯ ಆದೇಶ ಧಿಕ್ಕರಿಸಿ ಮುತ್ತಿಗೆ ಹಾಕಿದರೆ ಉಂಟಾಗಬಹುದಾದ ಯಾವುದೇ ಅನಾಹುತಗಳಿಗೆ ವಕೀಲರ ಸಂಘವೇ ಹೊಣೆಯಾಗಬೇಕಾಗುತ್ತದೆ ಎಂದು ಪೋಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಸ್ಪಷ್ಟವಾಗಿ ತಿಳಿಸಿದ್ದಾರೆ.
ಪ್ರತಿಭಟನಾ ಮೆರವಣಿಗೆಗೆ ಅನುಮತಿ ನಿರಾಕರಿಸಿರುವ ಪೊಲೀಸ್ ಆಯುಕ್ತರ ಕ್ರಮವನ್ನು ಸುಬ್ಬಾರೆಡ್ಡಿ ತೀವ್ರವಾಗಿ ಖಂಡಿಸಿದ್ದಾರೆ. ಪೊಲೀಸ್ ಇಲಾಖೆಯು ಅನಗತ್ಯವಾಗಿ ಬೆಂಗಳೂರು ನ್ಯಾಯಾಲಯದ ಸುತ್ತ ನಿಷೇಧಾಜ್ಞೆ ಹೇರಿದೆ. ಕೂಡಲೇ ನಿಷೇಧಾಜ್ಞೆಯನ್ನು ಹಿಂದಕ್ಕೆ ಪಡೆದು ವಕೀಲರಿಗೆ ಅನುಮತಿ ನೀಡಬೇಕು.
ಇಲ್ಲವಾದಲ್ಲಿ ಮುಂದೆ ಸಂಭವಿಸಬಹುದಾದ ಎಲ್ಲ ಅನಾಹುತಗಳಿಗೆ ಸರ್ಕಾರ ಮತ್ತು ಪೋಲೀಸ್ ಇಲಾಖೆಯೇ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧೆಡೆಯಿಂದ ಸಮಾರು 10 ಸಾವಿರ ವಕೀಲರು ಭಾಗವಹಿಸಲಿದ್ದಾರೆ ಎಂದು ಅಂದಾಜಿಸಲಾಗಿದೆ.












Click it and Unblock the Notifications