ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಯಿಂದ ಸಿಎಂ ಕಾರ್ಯದರ್ಶಿ ಪುಟ್ಟಸ್ವಾಮಿ ಉಚ್ಚಾಟನೆ

|
Google Oneindia Kannada News

B G Puttaswamy
ಬೆಂಗಳೂರು, ಮಾ 19: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ, ಯಡಿಯೂರಪ್ಪ ಅವರ ಬಲಗೈ ಬಂಟ ಬಿ ಜಿ ಪುಟ್ಟಸ್ವಾಮಿ ಅವರನ್ನು ಭಾರತೀಯ ಜನತಾಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ. ಪಕ್ಷಾಧ್ಯಕ್ಷ ಈಶ್ವರಪ್ಪ ಈ ಸಂಬಂಧ ಅಧಿಕೃತ ಹೇಳಿಕೆ ನೀಡಿದ್ದಾರೆ.

ಬಿಜೆಪಿಯಿಂದ ಅಲ್ಲದೇ ಹಿಂದುಳಿದ ವರ್ಗದ ವಿಶೇಷ ಆಹ್ವಾನಿತ ಸದಸ್ಯತ್ವದಿಂದಲೂ ವಜಾ ಮಾಡಲಾಗಿದೆ. ಪುಟ್ಟಸ್ವಾಮಿ ಅವರು ಪಕ್ಷದ ಅಧಿಕೃತ ಅಭ್ಯರ್ಥಿಯಲ್ಲ. ಬಸವರಾಜ ಪಾಟೀಲ್ ಸೇಡಂ ಹಾಗೂ ರಾಮಕೃಷ್ಣ ಮಾತ್ರ ಪಕ್ಷದ ಅಭ್ಯರ್ಥಿಗಳು ಎಂದು ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ಪುಟ್ಟಸ್ವಾಮಿ ಅವರ ನಾಮಪತ್ರಕ್ಕೆ ಬೆಂಬಲವಾಗಿ ಸಹಿ ಹಾಕಿದ ಹತ್ತು ಜನ ಬಿಜೆಪಿ ಶಾಸಕರಿಗೂ ನೋಟೀಸ್ ಜಾರಿ ಮಾಡಲಾಗಿದೆ ಎಂದು ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಸೋಮವಾರ ( ಮಾ 19) ವಿಧಾನಸೌಧಕ್ಕೆ ಏಕಾಂಗಿಯಾಗಿ ಬಂದ ಪುಟ್ಟಸ್ವಾಮಿ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿ ಬಿಜೆಪಿಗೆ ಇರುಸು ಮುರುಸು ಉಂಟು ಮಾಡಿದ್ದರು.

English summary
BJP expelled CM political secretary B G Puttaswamy from party primary membership for filing nomination for Rajya Sabha election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X