ಬಿಜೆಪಿಯಿಂದ ಸಿಎಂ ಕಾರ್ಯದರ್ಶಿ ಪುಟ್ಟಸ್ವಾಮಿ ಉಚ್ಚಾಟನೆ

ಬಿಜೆಪಿಯಿಂದ ಅಲ್ಲದೇ ಹಿಂದುಳಿದ ವರ್ಗದ ವಿಶೇಷ ಆಹ್ವಾನಿತ ಸದಸ್ಯತ್ವದಿಂದಲೂ ವಜಾ ಮಾಡಲಾಗಿದೆ. ಪುಟ್ಟಸ್ವಾಮಿ ಅವರು ಪಕ್ಷದ ಅಧಿಕೃತ ಅಭ್ಯರ್ಥಿಯಲ್ಲ. ಬಸವರಾಜ ಪಾಟೀಲ್ ಸೇಡಂ ಹಾಗೂ ರಾಮಕೃಷ್ಣ ಮಾತ್ರ ಪಕ್ಷದ ಅಭ್ಯರ್ಥಿಗಳು ಎಂದು ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ಪುಟ್ಟಸ್ವಾಮಿ ಅವರ ನಾಮಪತ್ರಕ್ಕೆ ಬೆಂಬಲವಾಗಿ ಸಹಿ ಹಾಕಿದ ಹತ್ತು ಜನ ಬಿಜೆಪಿ ಶಾಸಕರಿಗೂ ನೋಟೀಸ್ ಜಾರಿ ಮಾಡಲಾಗಿದೆ ಎಂದು ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಸೋಮವಾರ ( ಮಾ 19) ವಿಧಾನಸೌಧಕ್ಕೆ ಏಕಾಂಗಿಯಾಗಿ ಬಂದ ಪುಟ್ಟಸ್ವಾಮಿ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿ ಬಿಜೆಪಿಗೆ ಇರುಸು ಮುರುಸು ಉಂಟು ಮಾಡಿದ್ದರು.












Click it and Unblock the Notifications