ಸದಾನಂದ ಬೆನ್ನ ಹಿಂದೆ ಅಶೋಕ್, ಈಶ್ವರಪ್ಪ

R Ashok
ಬೆಂಗಳೂರು, ಮಾ.19: ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಡಿವಿ ಸದಾನಂದ ಗೌಡರೇ ಮಂಡಿಸಲಿದ್ದಾರೆ ಇದರಲ್ಲಿ ಎಳ್ಳಷ್ಟು ಸಂಶಯಬೇಡ ಎಂದು ಗೃಹ ಸಚಿವ ಆರ್ ಅಶೋಕ್ ಅವರು ಹೇಳಿದ್ದಾರೆ.

ಯಡಿಯೂರಪ್ಪ ಹಾಗೂ ಅವರ ಬೆಂಬಲಿಗರು ಕರೆದಿರುವ ಸಭೆಗೆ ನನಗೆ ಆಹ್ವಾನ ಸಿಕ್ಕಿಲ್ಲ. ಸಿಕ್ಕಿದ್ದರೂ ನಾನು ಹೋಗಲು ಆಗುತ್ತಿಲ್ಲ. ಗುಪ್ತ ಸಭೆ, ರೆಸಾರ್ಟ್ ರಾಜಕೀಯದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

ಡಿವಿ ಸದಾನಂದ ಗೌಡರು ಬಜೆಟ್ ಮಂಡಿಸಲಿ ಎಂದು ಪರಮಪೂಜ್ಯ ಸಿದ್ದಗಂಗಾಶ್ರೀಗಳು, ಆದಿಚುಂಚನಗಿರಿ ಬಾಲಗಂಗಾಧರನಾಥ ಸ್ವಾಮೀಜಿಗಳು ಆಶೀರ್ವದಿಸಿದ್ದಾರೆ. ಬಜೆಟ್ ಪುಸ್ತಕ ಸೋಮವಾರ ಮುದ್ರಣಕ್ಕೆ ಹೋಗುತ್ತದೆ.

ಜಗದೀಶ್ ಶೆಟ್ಟರ್ ಅವರಿಗೆ ಹೊಸ ಖಾತೆ(ಹಣಕಾಸು) ನೀಡುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ ಎಂದು ಅಶೋಕ್ ಹೇಳಿದ್ದಾರೆ.

ಯಡಿಯೂರಪ್ಪ ಹಾಗೂ ಬೆಂಬಲಿಗರು ಕರೆದ ಸಭೆ ಹಾಗೂ ರೆಸಾರ್ಟ್ ಹೋಗಲು ರಾಜ್ಯಾಧ್ಯಕ್ಷ ಕೆಎಸ್ ಈಶ್ವರಪ್ಪ ಕೂಡಾ ನಿರಾಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಯಡಿಯೂರಪ್ಪಕ್ಕೆ ಸೂಕ್ತ ಸ್ಥಾನಮಾನಕ್ಕಾಗಿ ಆಗ್ರಹಿಸಿ ದೆಹಲಿಗೆ ತೆರಳಲಿರುವ ಯಡಿಯೂರಪ್ಪ ಬೆಂಬಲಿಗರ ಜೊತೆ ಹೋಗಲು ಈಶ್ವರಪ್ಪ ನಿರಾಕರಿಸಿದ್ದರು.

ಈ ನಡುವೆ ಯಡಿಯೂರಪ್ಪ ಬೆಂಬಲಿಸಿ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಸಂಸದ ಡಿಬಿ ಚಂದ್ರೇಗೌಡ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಸದಾನಂದ ಗೌಡರ ಕಡೆ ಬಾಲಚಂದ್ರ ಜಾರಕಿಹೊಳಿ ಬಣ, ಈಶ್ವರಪ್ಪ, ಆರ್ ಅಶೋಕ್ ಹಾಗೂ ಚಂದ್ರೇಗೌಡರು ಪ್ರಮುಖವಾಗಿ ಗುರುತಿಸಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+