ಕನ್ನಡ ಬಾವುಟ ಹಾರಿಸುವುದು ಕಡ್ಡಾಯ : ಗೌಡ

ಪ್ರತಿ ನವೆಂಬರ್ 1, ಕನ್ನಡ ರಾಜ್ಯೋತ್ಸವದಂದು ಸರಕಾರಿ ಕಚೇರಿಗಳು, ಶಾಲಾ ಕಾಲೇಜುಗಳ ಮೇಲೆ ಹಳದಿ-ಕೆಂಪು ಬಣ್ಣದ ಕನ್ನಡ ಬಾವುಟವನ್ನು ಕಡ್ಡಾಯವಾಗಿ ಹಾರಿಸಬೇಕೆಂದು ಸದಾನಂದ ಗೌಡರು ಆಜ್ಞೆ ಹೊರಡಿಸಿದ್ದಾರೆ. ಸರಕಾರಿ ಕಚೇರಿ ಮಾತ್ರವಲ್ಲ ಇಲ್ಲಿರುವ ಎಲ್ಲ ಖಾಸಗಿ ಕಚೇರಿಗಳ ಮೇಲೆಯೂ ಕನ್ನಡ ಬಾವುಟ ಹಾರಿಸುವುದು ಕಡ್ಡಾಯ ಮಾಡಿದ್ದರೆ ಇನ್ನೂ ಚೆಂದಾಗಿರುತ್ತಿತ್ತು.
ಇದಲ್ಲದೆ, ಕನ್ನಡ ನಾಡಿನಲ್ಲಿ ಕನ್ನಡಮಯ ವಾತಾವರಣವನ್ನು ಸೃಷ್ಟಿಸುವ ಮತ್ತು ಚಟುವಟಿಕೆಗಳನ್ನು ಹೆಚ್ಚಿಸುವ ಉದ್ದೇಶದಿಂದ ಅನೇಕ ಅನುದಾನಗಳನ್ನು ಸದಾನಂದ ಗೌಡರು ಹರಿಯಬಿಟ್ಟಿದ್ದಾರೆ. ಅವುಗಳಲ್ಲಿ ಪ್ರಮುಖವಾದುದೆಂದರೆ, ಕನ್ನಡ ಮತ್ತು ಸಂಸ್ಕೃತಿಗೆ ಸಂಬಂಧಿತ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 269 ಕೋಟಿ ರು. ಅನುದಾನ ನೀಡಲಾಗಿದೆ.
ಕರ್ನಾಟಕದ ಹೆಮ್ಮೆಯ ಮೈಸೂರು ಅರಮನೆ 100 ವರ್ಷ ಪೂರೈಸಿರುವ ಸಂದರ್ಭದಲ್ಲಿ ಅಲ್ಲಿನ ವಾಸ್ತುಶಿಲ್ಪವನ್ನು ನವೀಕರಿಸುವ ಮತ್ತು ಉದ್ಯಾನವನವನ್ನು ಉನ್ನತ ದರ್ಜೆಗೆ ಏರಿಸಿ, ಪ್ರವಾಸಿಗರನ್ನು ಹೆಚ್ಚು ಆಕರ್ಷಿಸುವ ಉದ್ದೇಶದಿಂದ 25 ಕೋಟಿ ರು. ಅನುದಾನ ನೀಡಲಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ ರು. ಅನುದಾನ ಬಜೆಟ್ಟಿನಲ್ಲಿ ನೀಡಲಾಗಿದೆ.
ಹಾಗೆಯೆ, ಕರ್ನಾಟಕದ ಕರಾವಳಿಯ ಅತ್ಯಂತ ಜನಪ್ರಿಯ ಕ್ರೀಡೆ ಕಂಬಳವನ್ನು ಮತ್ತಷ್ಟು ಉತ್ತೇಜಿಸುವ ಉದ್ದೇಶದಿಂದ, ಆ ಆಚರಣೆಯನ್ನು ಸಾಂಸ್ಕೃತಿಕ ಕಾರ್ಯಕ್ರಮವಾಗಿ ದಾಖಲಿಸಲು ನಿರ್ಧರಿಸಲಾಗಿದ್ದು, ಆಚರಣೆಗಾಗಿ 1 ಕೋಟಿ ರು. ಮೊತ್ತವನ್ನು ಸದಾನಂದ ಗೌಡರು ಬಜೆಟ್ಟಿನಲ್ಲಿ ಒದಗಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications