ಕನ್ನಡ ಬಾವುಟ ಹಾರಿಸುವುದು ಕಡ್ಡಾಯ : ಗೌಡ

ಪ್ರತಿ ನವೆಂಬರ್ 1, ಕನ್ನಡ ರಾಜ್ಯೋತ್ಸವದಂದು ಸರಕಾರಿ ಕಚೇರಿಗಳು, ಶಾಲಾ ಕಾಲೇಜುಗಳ ಮೇಲೆ ಹಳದಿ-ಕೆಂಪು ಬಣ್ಣದ ಕನ್ನಡ ಬಾವುಟವನ್ನು ಕಡ್ಡಾಯವಾಗಿ ಹಾರಿಸಬೇಕೆಂದು ಸದಾನಂದ ಗೌಡರು ಆಜ್ಞೆ ಹೊರಡಿಸಿದ್ದಾರೆ. ಸರಕಾರಿ ಕಚೇರಿ ಮಾತ್ರವಲ್ಲ ಇಲ್ಲಿರುವ ಎಲ್ಲ ಖಾಸಗಿ ಕಚೇರಿಗಳ ಮೇಲೆಯೂ ಕನ್ನಡ ಬಾವುಟ ಹಾರಿಸುವುದು ಕಡ್ಡಾಯ ಮಾಡಿದ್ದರೆ ಇನ್ನೂ ಚೆಂದಾಗಿರುತ್ತಿತ್ತು.
ಇದಲ್ಲದೆ, ಕನ್ನಡ ನಾಡಿನಲ್ಲಿ ಕನ್ನಡಮಯ ವಾತಾವರಣವನ್ನು ಸೃಷ್ಟಿಸುವ ಮತ್ತು ಚಟುವಟಿಕೆಗಳನ್ನು ಹೆಚ್ಚಿಸುವ ಉದ್ದೇಶದಿಂದ ಅನೇಕ ಅನುದಾನಗಳನ್ನು ಸದಾನಂದ ಗೌಡರು ಹರಿಯಬಿಟ್ಟಿದ್ದಾರೆ. ಅವುಗಳಲ್ಲಿ ಪ್ರಮುಖವಾದುದೆಂದರೆ, ಕನ್ನಡ ಮತ್ತು ಸಂಸ್ಕೃತಿಗೆ ಸಂಬಂಧಿತ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 269 ಕೋಟಿ ರು. ಅನುದಾನ ನೀಡಲಾಗಿದೆ.
ಕರ್ನಾಟಕದ ಹೆಮ್ಮೆಯ ಮೈಸೂರು ಅರಮನೆ 100 ವರ್ಷ ಪೂರೈಸಿರುವ ಸಂದರ್ಭದಲ್ಲಿ ಅಲ್ಲಿನ ವಾಸ್ತುಶಿಲ್ಪವನ್ನು ನವೀಕರಿಸುವ ಮತ್ತು ಉದ್ಯಾನವನವನ್ನು ಉನ್ನತ ದರ್ಜೆಗೆ ಏರಿಸಿ, ಪ್ರವಾಸಿಗರನ್ನು ಹೆಚ್ಚು ಆಕರ್ಷಿಸುವ ಉದ್ದೇಶದಿಂದ 25 ಕೋಟಿ ರು. ಅನುದಾನ ನೀಡಲಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ ರು. ಅನುದಾನ ಬಜೆಟ್ಟಿನಲ್ಲಿ ನೀಡಲಾಗಿದೆ.
ಹಾಗೆಯೆ, ಕರ್ನಾಟಕದ ಕರಾವಳಿಯ ಅತ್ಯಂತ ಜನಪ್ರಿಯ ಕ್ರೀಡೆ ಕಂಬಳವನ್ನು ಮತ್ತಷ್ಟು ಉತ್ತೇಜಿಸುವ ಉದ್ದೇಶದಿಂದ, ಆ ಆಚರಣೆಯನ್ನು ಸಾಂಸ್ಕೃತಿಕ ಕಾರ್ಯಕ್ರಮವಾಗಿ ದಾಖಲಿಸಲು ನಿರ್ಧರಿಸಲಾಗಿದ್ದು, ಆಚರಣೆಗಾಗಿ 1 ಕೋಟಿ ರು. ಮೊತ್ತವನ್ನು ಸದಾನಂದ ಗೌಡರು ಬಜೆಟ್ಟಿನಲ್ಲಿ ಒದಗಿಸಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications