ವಿದ್ಯಾರ್ಥಿಗಳೊಂದಿಗೆ ಚೆಲ್ಲಾಟವಾಡಿದ ಕೋಲಾರದ ಮೇಷ್ಟ್ರು

ಚಿಂತಾಮಣಿಯ ಕೆಲ ಖಾಸಗಿ ಪಿಯುಸಿ ಕಾಲೇಜಿನಲ್ಲಿ ಕೆಲ ವಿಷಯಗಳ ಪ್ರಶ್ನೆಪತ್ರಿಕೆ ಬಯಲಾಗಿರುವ ಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವುದು ಕೋಲಾರ ಜಿಲ್ಲೆ ಶ್ರೀನಿವಾಸಪುರ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಭೌತಶಾಸ್ತ್ರ ಮತ್ತು ವಾಸು ಜೀವಶಾಸ್ತ್ರ ಉಪನ್ಯಾಸಕ ಶ್ರೀನಿವಾಸರೆಡ್ಡಿ ಮತ್ತು ಬಾಲಕರ ಕಾಲೇಜಿಲ್ಲಿ ರಸಾಯನಶಾಸ್ತ್ರ ಉಪನ್ಯಾಸಕರಾಗಿರುವ ಕೃಷ್ಣಾರೆಡ್ಡಿ.
ಇವರ ಜೊತೆಗೆ ಶಿಡ್ಲಘಟ್ಟ ಸರ್ಕಾರಿ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಬೈರಾರೆಡ್ಡಿ ಸಹ ಇರುವುದಾಗಿ, ಇವರೆಲ್ಲ ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನವರಾಗಿದ್ದು ಕೆಲವರೊಂದಿಗೆ ಸೇರಿ ಚಿಂತಾಮಣಿ ನಗರದಲ್ಲಿ ಬೆನಾಮಿ ಹೆಸರಿನಲ್ಲಿ ವೆಂಕಟಾದ್ರಿ ಖಾಸಗಿ ಪದವಿ ಪೂರ್ವ ಕಾಲೇಜು ನಡೆಸುತ್ತಿದ್ದಾರೆ. ಜೊತೆಗೆ ಅದರಲ್ಲಿ ಉಪನ್ಯಾಸಕರಾಗಿ ಎರಡೂ ಕಡೆಯಿಂದ ಸಂಬಳ ಗಿಂಜಿಕೊಳ್ಳುತ್ತಿದ್ದಾರೆ.
ಸರ್ಕಾರಿ ಕಾಲೇಜು ಉಪನ್ಯಾಸಕರಾಗಿ ಶ್ರೀನಿವಾಸಪುರ ಕಾಲೇಜಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸದೆ ಅಪರೂಪಕ್ಕೊಮ್ಮೆ ಕಾಲೇಜಿಗೆ ಬಂದು ಹೋಗುತ್ತಿದ್ದರು ಎನ್ನುವಂತಹ ದೂರು ಇವರ ಮೆಲೆ ಇದೆ. ವಾಸು ಎಂಬ ಮೇಷ್ಟ್ರು ಕೂಡ ಕಳೆದ ಏಳೆಂಟು ತಿಂಗಳಿನಿಂದ ಅನಾರೊಗ್ಯದ ನೆಪ ಒಡ್ಡಿ ರಜಾ ಹಾಕಿದ್ದರು. ಈಗ ಎರಡು ತಿಂಗಳಿನಿಂದ ಶ್ರೀನಿವಾಸಪುರದ ಕಾಲೇಜಿಗೆ ಬರುತ್ತಿರುವುದಾಗಿ ಇಲ್ಲಿನ ವಿದ್ಯಾರ್ಥಿಗಳು ಹೇಳುತ್ತಾರೆ.
ರಜೆಯ ಮೆಲಿದ್ದ ವಾಸು ಸಂಪೂರ್ಣವಾಗಿ ತನ್ನ ಬೆನಾಮಿ ಒಡೆತನದ ವೆಂಕಟಾದ್ರಿ ಕಾಲೇಜಿನಲ್ಲಿ ತೊಡಗಿಸಿಕೊಂಡಿದ್ದ ಎನ್ನುವಂತಹ ಗಂಭೀರ ಆರೋಪ ಮಾಡಲಾಗಿದೆ. ಉಳಿದಂತೆ ಶ್ರೀನಿವಾಸರೆಡ್ಡಿ ಮತ್ತು ಕೃಷ್ಣಾರೆಡ್ಡಿ ನಾಮಕಾವಸ್ತೆ ಸರ್ಕಾರಿ ಕಾಲೇಜಿಗೆ ಬಂದು ಹೋಗುತ್ತಿದ್ದರು. ಇದರೊಂದಿಗೆ ವೆಂಕಟಾದ್ರಿ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿರುವ ಬಹುತೇಕ ವಿದ್ಯಾರ್ಥಿಗಳು ಶ್ರೀನಿವಾಸಪುರ ತಾಲೂಕಿನವರೆ.
ಪ್ರಥಮ ಪಿಯು ಅನ್ನು ಇಲ್ಲಿನ ಸರ್ಕಾರಿ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಅವರ ಆರ್ಥಿಕ ಶೈಕ್ಷಣಿಕ ಗುಣಮಟ್ಟದ ಆಧಾರದಲ್ಲಿ ಗುರುತಿಸಿ ಅವರ ಪೋಷಕರನ್ನು ಕಂಡು ಮಾತನಾಡಿ ನಿಮ್ಮ ಮಗು ಇಲ್ಲೆ ಓದು ಮುಂದುವರೆಸಿದರೆ ಉತ್ತಮ ಭವಿಷ್ಯ ಇರುವುದಿಲ್ಲ ಎಂದು ಅವರನ್ನು ಒಲೈಸಿ ಎರಡನೇ ವರ್ಷದ ಅಭ್ಯಾಸಕ್ಕೆ ತಮ್ಮ ಒಡೆತನದ ಚಿಂತಾಮಣಿ ಖಾಸಗಿ ಕಾಲೇಜಿಗೆ ರವಾನಿಸಿಕೊಳ್ಳುತ್ತಾರೆ.
ಚಿಂತಾಮಣಿಯ ಮತ್ತು ಎರಡು ಪಿಯು ಖಾಸಗಿ ಕಾಲೇಜುಗಳಾದ ವಿಜಯ ಹಾಗು ರಾಯಲ್ ಕಾಲೇಜುಗಳು ಸೇರಿದಂತೆ ವೆಂಕಟಾದ್ರಿ ಕಾಲೇಜಿನ ಮಾನ್ಯತೆಯನ್ನು ರದ್ದುಮಾಡಿ ಉಪನ್ಯಾಸಕ ವಾಸುವನ್ನು ಅಮಾನತ್ತು ಮಾಡಿ ಕಾಲೇಜು ಶಿಕ್ಷಣ ಇಲಾಖೆ ಅಧಿಕಾರಿ ಆದೇಶ ಹೊರಡಿಸಿರುವ ಬಗ್ಗೆ ವೆಂಕಟಾದ್ರಿ ಶಾಲೆಯ ಪೋಷಕರು ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ. ಆದರೆ ತಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯತ್ತಿನ ಬಗ್ಗೆ ಸರ್ಕಾರ ವಿಶೇಷ ಕಾಳಜಿ ವಹಿಸುವಂತೆ ಆಗ್ರಹಿಸಿರುತ್ತಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications